'ಕಳೆದ ನಾಲ್ಕೈದು ವರ್ಷಗಳಲ್ಲಿ ಮದ್ಯ, ಬಸ್ ಸಂಚಾರ ಮುಂತಾದ ಪ್ರಮುಖ ವಿಚಾರಗಳಿಗೆ ಸಂಬಂಧಿಸಿ ಜನಪರವಾದ ಹೋರಾಟ ನಡೆಸಿದ್ದೇನೆ. ಮುಖ್ಯಮಂತ್ರಿ ಅಧಿಕಾರವನ್ನೆಲ್ಲಾ ಕೇಂದ್ರೀಕೃತ ಮಾಡಿಕೊಂಡಿದ್ದರು ಆದರೆ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ. ನನಗೆ ಯಾವುದೇ ಸ್ಥಾನದ ಮೇಲೆ ಆಸೆ ಇಲ್ಲ. ಪಂಜಾಬ್ ಜನರ ಹಕ್ಕುಗಳಿಗಾಗಿ ಹೋರಾಡುವುದೇ ನನ್ನ ಮುಖ್ಯ ಉದ್ದೇಶ. 2022ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 80-100 ಸ್ಥಾನಗಳನ್ನು ಗೆಲ್ಲುವಂತೆ ಮಾಡುತ್ತೇನೆ' ಎಂದು ಸಿಧು ಭರವಸೆ ವ್ಯಕ್ತಪಡಿಸಿದರು.