ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕ್ಸಲ್‌ ದಾಳಿ: ಛತ್ತೀಸಗಡಕ್ಕೆ ಭೇಟಿ ನೀಡಲು ಸಿಆರ್‌ಪಿಎಫ್‌ ಡಿಜಿಗೆ ಸಿಎಂ ಸೂಚನೆ

ಮುಖ್ಯಮಂತ್ರಿ ಬಘೇಲ್‌ ಜೊತೆ ಗೃಹ ಸಚಿವ ಶಾ ಚರ್ಚೆ
Last Updated 4 ಏಪ್ರಿಲ್ 2021, 6:05 IST
ಅಕ್ಷರ ಗಾತ್ರ

ನವದೆಹಲಿ: ಮಾವೋವಾದಿ ನಕ್ಸಲರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ಯೋಧರು ಸಾವನ್ನಪ್ಪಿದ ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರೊಂದಿಗೆ ಭಾನುವಾರ ಚರ್ಚೆ ನಡೆಸಿದರು.

ಛತ್ತೀಸಗಡಕ್ಕೆ ಭೇಟಿ ನೀಡಿ, ಪರಿಸ್ಥಿತಿಯ ಅವಲೋಕನ ಮಾಡುವಂತೆ ಸಿಆರ್‌ಪಿಎಫ್‌ ನ ಮಹಾ ನಿರ್ದೇಶಕ ಕುಲದೀಪ್ ಸಿಂಗ್‌ ಅವರಿಗೆ ಶಾ ನಿರ್ದೇಶನ ನೀಡಿದರು.

‘ಎನ್‌ಕೌಂಟರ್‌ ಹಿನ್ನೆಲೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಘೇಲ್‌ ಅವರು ಗೃಹ ಸಚಿವ ಶಾ ಅವರಿಗೆ ವಿವರಿಸಿದರು’ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಸಿಆರ್‌ಪಿಎಫ್‌ನ ಐವರು ಯೋಧರು ಹುತಾತ್ಮರಾಗಿ, 30 ಹೆಚ್ಚು ಯೋಧರು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT