<p class="title"><strong>ಜಮ್ಮು: </strong>ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಇಬ್ಬರು ಪ್ರಮುಖ ನಾಯಕರಾದ ದೇವೇಂದರ್ ರಾಣಾ ಮತ್ತು ಸುರ್ಜಿತ್ ಸಿಂಗ್ ಸ್ಲಾಥಿಯಾ ಅವರು ಭಾನುವಾರ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.</p>.<p class="title">ಈ ಇಬ್ಬರು ನಾಯಕರು ಸೋಮವಾರ ದೆಹಲಿಯಲ್ಲಿ ಬಿಜೆಪಿಗೆ ಸೇರುವ ಸಾಧ್ಯತೆಗಳಿವೆ. ಈ ಬೆಳವಣಿಗೆಯಿಂದಾಗಿ ನ್ಯಾಷನಲ್ ಕಾನ್ಫರೆನ್ಸ್ಗೆ ತೀವ್ರ ಹಿನ್ನಡೆಯಾಗಿದೆ.</p>.<p>‘ಸ್ಲಾಥಿಯಾ ಮತ್ತು ರಾಣಾ ಅವರ ರಾಜೀನಾಮೆ ಪತ್ರಗಳನ್ನು ಡಾ.ಫಾರೂಕ್ ಅಬ್ದುಲ್ಲಾ ಸ್ವೀಕರಿಸಿದ್ದು, ಅಂಗೀಕರಿಸಿದ್ದಾರೆ. ಈ ಸಂಬಂಧ ಯಾವುದೇ ಕ್ರಮ ಅಥವಾ ಪ್ರತಿಕ್ರಿಯೆ ಅಗತ್ಯವಿಲ್ಲ’ ಎಂದು ನ್ಯಾಷನಲ್ ಕಾನ್ಫರೆನ್ಸ್ ವಕ್ತಾರರು ಟ್ವೀಟ್ ಮಾಡಿದ್ದಾರೆ.</p>.<p>ರಾಣಾ ಅವರು ನ್ಯಾಷನಲ್ ಕಾನ್ಫರೆನ್ಸ್ನ ಜಮ್ಮು ವಲಯ ಘಟಕದ ಅಧ್ಯಕ್ಷರಾಗಿದ್ದರು. ರಾಜೀನಾಮೆ ನೀಡಿ, ಬಿಜೆಪಿ ಸೇರುವರು ಎಂದು ಹಲವು ದಿನಗಳಿಂದ ವದಂತಿ ಇತ್ತು. ಭಾನುವಾರ ಸ್ವತಃ ರಾಜೀನಾಮೆ ತೀರ್ಮಾನ ಪ್ರಕಟಿಸುವ ಮೂಲಕ ರಾಣಾ ತೆರೆ ಎಳೆದಿದ್ದರು.</p>.<p>‘ನಾನು ಮತ್ತು ಪಕ್ಷದ ಹಿರಿಯ ಸಹೋದ್ಯೋಗಿ ಎಸ್.ಎಸ್.ಸ್ಲಾಥಿಯಾ ನ್ಯಾಷನಲ್ ಕಾನ್ಫರೆನ್ಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇವೆ ಎಂದು ತಿಳಿಸಿದ್ದರು. ರಾಣಾ ಅವರು, ಕೇಂದ್ರದ ಮಾಜಿ ಸಚಿವ ಜಿತೇಂದ್ರ ಸಿಂಗ್ ಅವರ ತಮ್ಮ.</p>.<p>‘ತಮ್ಮ ರಾಜಕೀಯ ಸಿದ್ಧಾಂತ, ಧ್ಯೇಯವು ಉದ್ದೇಶಿತ ‘ಜಮ್ಮು ಘೋಷಣೆ’ಯನ್ನು ಆಧರಿಸಿರುತ್ತದೆ’ ಎಂದು ಹೇಳಿದರು. ‘ಅವರು ಜನವರಿ 30ರಂದು ಜಮ್ಮು ಘೋಷಣೆ ಪ್ರಕಟಿಸಿದ್ದರು. ಜಮ್ಮು ಮತ್ತು ಕಾಶ್ಮೀರದ ವಿವಿಧ ಸಮುದಾಯಗಳ ನಡುವೆ ಪರಸ್ಪರ ವಿಶ್ವಾಸವನ್ನು ಮೂಡಿಸುವುದು ಉಲ್ಲೇಖಿತ ಜಮ್ಮು ಘೋಷಣೆಯ ಗುರಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಜಮ್ಮು: </strong>ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಇಬ್ಬರು ಪ್ರಮುಖ ನಾಯಕರಾದ ದೇವೇಂದರ್ ರಾಣಾ ಮತ್ತು ಸುರ್ಜಿತ್ ಸಿಂಗ್ ಸ್ಲಾಥಿಯಾ ಅವರು ಭಾನುವಾರ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.</p>.<p class="title">ಈ ಇಬ್ಬರು ನಾಯಕರು ಸೋಮವಾರ ದೆಹಲಿಯಲ್ಲಿ ಬಿಜೆಪಿಗೆ ಸೇರುವ ಸಾಧ್ಯತೆಗಳಿವೆ. ಈ ಬೆಳವಣಿಗೆಯಿಂದಾಗಿ ನ್ಯಾಷನಲ್ ಕಾನ್ಫರೆನ್ಸ್ಗೆ ತೀವ್ರ ಹಿನ್ನಡೆಯಾಗಿದೆ.</p>.<p>‘ಸ್ಲಾಥಿಯಾ ಮತ್ತು ರಾಣಾ ಅವರ ರಾಜೀನಾಮೆ ಪತ್ರಗಳನ್ನು ಡಾ.ಫಾರೂಕ್ ಅಬ್ದುಲ್ಲಾ ಸ್ವೀಕರಿಸಿದ್ದು, ಅಂಗೀಕರಿಸಿದ್ದಾರೆ. ಈ ಸಂಬಂಧ ಯಾವುದೇ ಕ್ರಮ ಅಥವಾ ಪ್ರತಿಕ್ರಿಯೆ ಅಗತ್ಯವಿಲ್ಲ’ ಎಂದು ನ್ಯಾಷನಲ್ ಕಾನ್ಫರೆನ್ಸ್ ವಕ್ತಾರರು ಟ್ವೀಟ್ ಮಾಡಿದ್ದಾರೆ.</p>.<p>ರಾಣಾ ಅವರು ನ್ಯಾಷನಲ್ ಕಾನ್ಫರೆನ್ಸ್ನ ಜಮ್ಮು ವಲಯ ಘಟಕದ ಅಧ್ಯಕ್ಷರಾಗಿದ್ದರು. ರಾಜೀನಾಮೆ ನೀಡಿ, ಬಿಜೆಪಿ ಸೇರುವರು ಎಂದು ಹಲವು ದಿನಗಳಿಂದ ವದಂತಿ ಇತ್ತು. ಭಾನುವಾರ ಸ್ವತಃ ರಾಜೀನಾಮೆ ತೀರ್ಮಾನ ಪ್ರಕಟಿಸುವ ಮೂಲಕ ರಾಣಾ ತೆರೆ ಎಳೆದಿದ್ದರು.</p>.<p>‘ನಾನು ಮತ್ತು ಪಕ್ಷದ ಹಿರಿಯ ಸಹೋದ್ಯೋಗಿ ಎಸ್.ಎಸ್.ಸ್ಲಾಥಿಯಾ ನ್ಯಾಷನಲ್ ಕಾನ್ಫರೆನ್ಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇವೆ ಎಂದು ತಿಳಿಸಿದ್ದರು. ರಾಣಾ ಅವರು, ಕೇಂದ್ರದ ಮಾಜಿ ಸಚಿವ ಜಿತೇಂದ್ರ ಸಿಂಗ್ ಅವರ ತಮ್ಮ.</p>.<p>‘ತಮ್ಮ ರಾಜಕೀಯ ಸಿದ್ಧಾಂತ, ಧ್ಯೇಯವು ಉದ್ದೇಶಿತ ‘ಜಮ್ಮು ಘೋಷಣೆ’ಯನ್ನು ಆಧರಿಸಿರುತ್ತದೆ’ ಎಂದು ಹೇಳಿದರು. ‘ಅವರು ಜನವರಿ 30ರಂದು ಜಮ್ಮು ಘೋಷಣೆ ಪ್ರಕಟಿಸಿದ್ದರು. ಜಮ್ಮು ಮತ್ತು ಕಾಶ್ಮೀರದ ವಿವಿಧ ಸಮುದಾಯಗಳ ನಡುವೆ ಪರಸ್ಪರ ವಿಶ್ವಾಸವನ್ನು ಮೂಡಿಸುವುದು ಉಲ್ಲೇಖಿತ ಜಮ್ಮು ಘೋಷಣೆಯ ಗುರಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>