ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಯನ್‌ ಖಾನ್‌ ಅಪಹರಣಕ್ಕೆ ಸಂಚು: ಸಮೀರ್‌ ವಾಂಖೆಡೆ ವಿರುದ್ಧ ಸಚಿವ ಮಲಿಕ್‌ ಆರೋಪ

Last Updated 7 ನವೆಂಬರ್ 2021, 7:09 IST
ಅಕ್ಷರ ಗಾತ್ರ

ಮುಂಬೈ: ಎನ್‌ಸಿಬಿ ಮುಂಬೈ ವಲಯದ ನಿರ್ದೇಶಕ ಸಮೀರ್‌ ವಾಂಖೆಡೆ ಅವರು ಬಾಲಿವುಡ್‌ ನಟ ಶಾರುಕ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ರನ್ನು ಅಪಹರಿಸುವ ಸಂಚೊಂದರ ಭಾಗವಾಗಿದ್ದರು ಎಂದು ಮಹಾರಾಷ್ಟ್ರದ ಸಚಿವ ನವಾಬ್‌ ಮಲಿಕ್‌ ಭಾನುವಾರ ಆರೋಪಿಸಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕ ಮೋಹಿತ್‌ ಭಾರತೀಯ ಅವರು ಈ ಸಂಚಿನ ಸೂತ್ರದಾರ ಆಗಿದ್ದರು ಎಂದು ಹೇಳಿದರು.

ವಾಂಖೆಡೆ ಅವರು ಓಶಿವಾರಾ ಉಪನಗರದ ಸ್ಮಶಾನವೊಂದರಲ್ಲಿ ಭಾರತೀಯ ಅವರು ಭೇಟಿಯಾಗಿದ್ದರು ಎಂದು ಮಲಿಕ್‌ ಹೇಳಿದರು.

ಕಳೆದ ತಿಂಗಳು ವಾಂಖೆಡೆ ನೇತೃತ್ವದ ಎನ್‌ಸಿಬಿ ತಂಡ ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿ ಡ್ರಗ್ಸ್‌ ವಶಪಡಿಸಿಕೊಂಡಿತ್ತು. ಈ ವೇಳೆ ಅಲ್ಲಿದ್ದ ಆರ್ಯನ್‌ ಖಾನ್‌ ಅವರನ್ನು ಬಂಧಿಸಲಾಗಿತ್ತು.

ಹಡಗಿನಲ್ಲಿ ಡ್ರಗ್ಸ್‌ ಪತ್ತೆ ಪ್ರಕರಣವು ನಕಲಿಯಾದುದು ಎಂದು ಪುನರುಚ್ಚರಿಸಿದ ಮಲಿಕ್‌ ವಾಂಖೆಡೆ ವಿರುದ್ಧ ಸರಣಿ ಆರೋಪಗಳನ್ನು ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT