<p><strong>ಮುಂಬೈ: </strong>ರಿಪಬ್ಲಿಕ್ ಟಿ.ವಿ. ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ(ಸಿಇಒ) ಪಾರ್ಥೊ ದಾಸ್ಗುಪ್ತಾ ನಡುವೆ ನಡೆದಿದೆ ಎನ್ನಲಾದ ವಾಟ್ಸ್ಆ್ಯಪ್ ಚಾಟ್ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ ರಚಿಸುವಂತೆ ಎನ್ಸಿಪಿ ಒತ್ತಾಯಿಸಿದೆ.</p>.<p>ಬಾಲಾಕೋಟ್ ವಾಯುನೆಲೆ ಮೇಲಿನ ದಾಳಿಯ ಗುಪ್ತಚರ ಮಾಹಿತಿ ಸೋರಿಕೆಯಾಗಿತ್ತು ಎಂಬ ವಿಷಯವನ್ನು ಉಲ್ಲೇಖಿಸಿದ ಎನ್ಸಿಪಿ ಮುಖ್ಯ ವಕ್ತಾರ ಮಹೇಶ್ ತಪಾಸೆ, ‘ಟಿಆರ್ಪಿಗೋಸ್ಕರ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ಬಳಸಲಾಗಿದೆ ಎಂಬ ವಿಷಯ ನಿಜಕ್ಕೂ ಅಫಾತಕಾರಿಯಾಗಿದೆ’ ಎಂದರು.</p>.<p>‘ಈ ವಿಷಯ ಸಂಬಂಧ ನಾನು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಮಂಗಳವಾರ ಭೇಟಿಯಾಗಲಿದ್ದೇನೆ. ಅಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಈ ಬಗ್ಗೆ ಸ್ಪಷ್ಟನೆ ಕೂಡ ಕೇಳಲಿದ್ಧೇನೆ’ ಎಂದು ಮಹೇಶ್ ತಪಾಸೆ ಹೇಳಿದರು.</p>.<p>‘ಅರ್ನಬ್ ಗೋಸ್ವಾಮಿಗೆ ಈ ರೀತಿಯ ಗೌಪ್ಯ ವಿಷಯ ಹೇಗೆ ಸಿಕ್ಕಿದೆ ಎಂಬುದೇ ದೊಡ್ಡ ಸವಾಲು. ಗೃಹ ಸಚಿವಾಲಯವು ಈ ಬಗ್ಗೆ ಶೀಘ್ರ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದರು.</p>.<p>‘ಮುಂಬೈ ಪೊಲೀಸರು ಮತ್ತು ಮಹಾ ವಿಕಾಸ್ ಅಘಾಡಿ ಸರ್ಕಾರದ ಹೆಸರಿಗೆ ಧಕ್ಕೆ ತರುವ ಕಾರ್ಯದಲ್ಲಿ ಅರ್ನಬ್ ಮುಂಚೂಣಿಯಲ್ಲಿದ್ದಾರೆ’ ಎಂದು ಅವರು ಟೀಕಿಸಿದರು.</p>.<p>‘ಗೋಸ್ವಾಮಿ ಅವರು ಪಾಲ್ಗರ್ ಘಟನೆಗೆ ಕೋಮು ಗಲಭೆಯ ಆಯಾಮ ನೀಡಲು ಪ್ರಯತ್ನಿಸಿದರು. ಅಲ್ಲದೆ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಸುಳ್ಳನ್ನು ಹೇಳಿದರು’ ಎಂದು ಅವರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ರಿಪಬ್ಲಿಕ್ ಟಿ.ವಿ. ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ(ಸಿಇಒ) ಪಾರ್ಥೊ ದಾಸ್ಗುಪ್ತಾ ನಡುವೆ ನಡೆದಿದೆ ಎನ್ನಲಾದ ವಾಟ್ಸ್ಆ್ಯಪ್ ಚಾಟ್ ಬಗ್ಗೆ ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ ರಚಿಸುವಂತೆ ಎನ್ಸಿಪಿ ಒತ್ತಾಯಿಸಿದೆ.</p>.<p>ಬಾಲಾಕೋಟ್ ವಾಯುನೆಲೆ ಮೇಲಿನ ದಾಳಿಯ ಗುಪ್ತಚರ ಮಾಹಿತಿ ಸೋರಿಕೆಯಾಗಿತ್ತು ಎಂಬ ವಿಷಯವನ್ನು ಉಲ್ಲೇಖಿಸಿದ ಎನ್ಸಿಪಿ ಮುಖ್ಯ ವಕ್ತಾರ ಮಹೇಶ್ ತಪಾಸೆ, ‘ಟಿಆರ್ಪಿಗೋಸ್ಕರ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ಬಳಸಲಾಗಿದೆ ಎಂಬ ವಿಷಯ ನಿಜಕ್ಕೂ ಅಫಾತಕಾರಿಯಾಗಿದೆ’ ಎಂದರು.</p>.<p>‘ಈ ವಿಷಯ ಸಂಬಂಧ ನಾನು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಮಂಗಳವಾರ ಭೇಟಿಯಾಗಲಿದ್ದೇನೆ. ಅಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಈ ಬಗ್ಗೆ ಸ್ಪಷ್ಟನೆ ಕೂಡ ಕೇಳಲಿದ್ಧೇನೆ’ ಎಂದು ಮಹೇಶ್ ತಪಾಸೆ ಹೇಳಿದರು.</p>.<p>‘ಅರ್ನಬ್ ಗೋಸ್ವಾಮಿಗೆ ಈ ರೀತಿಯ ಗೌಪ್ಯ ವಿಷಯ ಹೇಗೆ ಸಿಕ್ಕಿದೆ ಎಂಬುದೇ ದೊಡ್ಡ ಸವಾಲು. ಗೃಹ ಸಚಿವಾಲಯವು ಈ ಬಗ್ಗೆ ಶೀಘ್ರ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದರು.</p>.<p>‘ಮುಂಬೈ ಪೊಲೀಸರು ಮತ್ತು ಮಹಾ ವಿಕಾಸ್ ಅಘಾಡಿ ಸರ್ಕಾರದ ಹೆಸರಿಗೆ ಧಕ್ಕೆ ತರುವ ಕಾರ್ಯದಲ್ಲಿ ಅರ್ನಬ್ ಮುಂಚೂಣಿಯಲ್ಲಿದ್ದಾರೆ’ ಎಂದು ಅವರು ಟೀಕಿಸಿದರು.</p>.<p>‘ಗೋಸ್ವಾಮಿ ಅವರು ಪಾಲ್ಗರ್ ಘಟನೆಗೆ ಕೋಮು ಗಲಭೆಯ ಆಯಾಮ ನೀಡಲು ಪ್ರಯತ್ನಿಸಿದರು. ಅಲ್ಲದೆ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಸುಳ್ಳನ್ನು ಹೇಳಿದರು’ ಎಂದು ಅವರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>