’ಗಡಿ ಪ್ರದೇಶದ ಮರಾಠಿ ಭಾಷಿಕರ ಮೇಲೆ ಬೇಕಂತಲೇ ಕರ್ನಾಟಕ ದಬ್ಬಾಳಿಕೆ ನಡೆಸುತ್ತಿದೆ. ಕರ್ನಾಟಕ ಮುಖ್ಯಮಂತ್ರಿಗೆ ಅವರ ಭಾಷೆಯಲ್ಲೇ ಉತ್ತರ ನೀಡಬೇಕು. ಅವರಿಗೆ ಅಷ್ಟೊಂದು ಗರ್ವವಿದ್ದರೆ, ನಾವು ಕೋಯ್ನಾ ಮತ್ತು ವಾರ್ನ ನದಿಗಳಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟೆಗಳು ಹಾಗೂ ಸತಾರ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ನಿರ್ಮಿಸಲಾಗಿರುವ ಅಣೆಕಟ್ಟುಗಳ ಎತ್ತರವನ್ನು ಹೆಚ್ಚಿಸೋಣ. ಇಲ್ಲದಿದ್ದರೆ ಕರ್ನಾಟಕದ ನಾಯಕರನ್ನು ನಿಯಂತ್ರಣಕ್ಕೆ ತರಲು ಸಾಧ್ಯವಿಲ್ಲ‘ ಎಂದು ಹೇಳಿದರು.