ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ನೀಡಿರುವ ಕೋವಿಡ್ ಮಾರ್ಗಸೂಚಿಯ ಬಗ್ಗೆ ಮಾತನಾಡಿದ ಎನ್ಸಿಪಿ ಮುಖ್ಯಸ್ಥ, ʼಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳುತ್ತಿದೆ. ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರ ಅದನ್ನು ಮಾಡುತ್ತಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ, ಕೇಂದ್ರ ಸರ್ಕಾರವು ಒಂದು ನಿಲುವು ತಳೆದಾಗ, ಅದನ್ನು ಆ ಪಕ್ಷದ (ಬಿಜೆಪಿ) ಕಾರ್ಯಕರ್ತರೂ ಪಾಲಿಸಬೇಕುʼ ಎಂದು ಹೇಳಿದ್ದಾರೆ.