ಸದ್ಯ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿರುವಏಕನಾಥ ಶಿಂಧೆ ನೇತೃತ್ವದಲ್ಲಿ ಹಲವು ಶಾಸಕರು ಇತ್ತೀಚೆಗೆ ಬಂಡಾಯ ಘೋಷಿಸಿದ್ದರು. ಇದಾದ ಬಳಿಕಎನ್ಸಿಪಿ, ಶಿವಸೇನಾ ಹಾಗೂ ಕಾಂಗ್ರೆಸ್ ಪಕ್ಷಗಳನ್ನೊಳಗೊಂಡ 'ಮಹಾ ವಿಕಾಸ ಆಘಾಡಿ' ಮೈತ್ರಿಕೂಟದ ಸರ್ಕಾರ ಪತನಗೊಂಡಿತ್ತು. ಹೀಗಾಗಿ, 31 ತಿಂಗಳು ಮುಖ್ಯಮಂತ್ರಿಯಾಗಿದ್ದಶಿವಸೇನಾ ಮುಖ್ಯಸ್ಥಉದ್ಧವ್ ಠಾಕ್ರೆ ಜೂನ್ 30ರಂದು ಸಿಎಂ ಸ್ಥಾನದಿಂದ ಕೆಳಗಿಳಿದಿದ್ದರು. ಇದೀಗ ಬಿಜೆಪಿ ಬೆಂಬಲದೊಂದಿಗೆ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ.