‘ಸಂವಿಧಾನದ 7ನೇ ಅನುಸೂಚಿ ಪ್ರಕಾರ, ಪೊಲೀಸ್ ಹಾಗೂ ಕಾನೂನು–ಸುವ್ಯವಸ್ಥೆ ಕಾಪಾಡುವುದು ರಾಜ್ಯಕ್ಕೆ ಸೇರಿದ ವಿಷಯಗಳಾಗಿವೆ. ಅಪರಾಧಗಳನ್ನು ತಡೆಯುವುದು, ಪತ್ತೆ ಹಚ್ಚುವುದು, ತನಿಖೆ ನಡೆಸಿ ಅಪರಾಧಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಾದ್ದು ರಾಜ್ಯ ಸರ್ಕಾರಗಳ ಜವಾಬ್ದಾರಿ’ ಎಂದು ಅವರು ಸದನಕ್ಕೆ ತಿಳಿಸಿದರು.