<p class="title"><strong>ನವದೆಹಲಿ: </strong>ಸಚಿವೆ ಇಮಾರ್ತಿ ದೇವಿ ಅವರನ್ನು ‘ಐಟಂ’ ಎಂದು ಟೀಕಿಸಿದ್ದ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ಅವರಿಂದ ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯು) ವಿವರಣೆ ಕೋರಿದೆ.</p>.<p class="title">ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗಕ್ಕೂ ಮಹಿಳಾ ಆಯೋಗ ಮನವಿ ಮಾಡಿದೆ.</p>.<p class="title">‘ಕಾಂಗ್ರೆಸ್ ಮುಖಂಡ ನೀಡಿರುವ ಈ ಬೇಜವಾಬ್ದಾರಿಯುತ ಮತ್ತು ಅವಹೇಳನಕಾರಿ ಹೇಳಿಕೆಯನ್ನು ಆಯೋಗವು ಬಲವಾಗಿ ಖಂಡಿಸುತ್ತದೆ. ವಿಡಿಯೊದಲ್ಲಿ ಬಳಸಲಾದ ಪದಗಳು ಮಹಿಳೆಯ ಘನತೆಗೆ ಕುಂದುಂಟು ಮಾಡುವುದಲ್ಲೇ, ಅಗೌರವ ತೋರಿಸುತ್ತವೆ’ ಎಂದೂ ಆಯೋಗ ತನ್ನ ಹೇಳಿಕೆಯಲ್ಲಿ ತಿಳಿಸಿದೆ.</p>.<p class="title">‘ಮಹಿಳೆಯರು ಹೆಚ್ಚು ಸಂಖ್ಯೆಯಲ್ಲಿ ರಾಜಕೀಯ ಕ್ಷೇತ್ರಕ್ಕೆ ಬರಬೇಕೆನ್ನುವ ಆಶಯದಲ್ಲಿ ನಾವಿರುವಾಗ, ಮಹಿಳಾ ನಾಯಕರ ಬಗೆಗಿನ ಅಗೌರವ ಸೂಚಕವಾದ ಹೇಳಿಕೆಗಳು ಶೋಭೆ ತರುವುದಿಲ್ಲ. ಅದರಲ್ಲೂ ಅಂಥದ್ದೊಂದು ಜವಾಬ್ದಾರಿಯುತ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಹೀಗೆ ಮಾತನಾಡುವುದು ದುರದೃಷ್ಟಕರ’ ಎಂದು ಆಯೋಗ ವಿಷಾದಿಸಿದೆ.</p>.<p class="title"><strong>ಏನಿದು ಘಟನೆ?: </strong>ಗ್ವಾಲಿಯರ್ ದಬ್ರಾ ಪಟ್ಟಣದಲ್ಲಿ ಭಾನುವಾರ ನಡೆದ ಚುನಾವಣಾ ಸಭೆಯಲ್ಲಿ, ಕಮಲ್ನಾಥ್ ಅವರು ‘ಎದುರಾಳಿ ‘ಐಟಂ’ ಅಭ್ಯರ್ಥಿಗೆ (ಬಿಜೆಪಿಯ ಇಮಾರ್ತಿ ದೇವಿ) ಹೋಲಿಸಿದರೆ ಕಾಂಗ್ರೆಸ್ ಅಭ್ಯರ್ಥಿಯು ಸರಳ ವ್ಯಕ್ತಿ’ ಎಂದು ಹೇಳಿದ್ದರು.</p>.<p class="title">ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನಿಷ್ಠರಾಗಿರುವ ಇಮಾರ್ತಿ ದೇವಿ ಸೇರಿದಂತೆ 21 ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಈ ಪ್ರಕ್ರಿಯೆಯಲ್ಲಿ ಕಮಲ್ನಾಥ್ ಸರ್ಕಾರವು ಉರುಳಿಬಿದ್ದಿತ್ತು.</p>.<p class="title">ಮಧ್ಯಪ್ರದೇಶದಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ಚುನಾವಣೆ ನಡೆಯಲಿದೆ. ನ. 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಸಚಿವೆ ಇಮಾರ್ತಿ ದೇವಿ ಅವರನ್ನು ‘ಐಟಂ’ ಎಂದು ಟೀಕಿಸಿದ್ದ ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ಅವರಿಂದ ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯು) ವಿವರಣೆ ಕೋರಿದೆ.</p>.<p class="title">ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗಕ್ಕೂ ಮಹಿಳಾ ಆಯೋಗ ಮನವಿ ಮಾಡಿದೆ.</p>.<p class="title">‘ಕಾಂಗ್ರೆಸ್ ಮುಖಂಡ ನೀಡಿರುವ ಈ ಬೇಜವಾಬ್ದಾರಿಯುತ ಮತ್ತು ಅವಹೇಳನಕಾರಿ ಹೇಳಿಕೆಯನ್ನು ಆಯೋಗವು ಬಲವಾಗಿ ಖಂಡಿಸುತ್ತದೆ. ವಿಡಿಯೊದಲ್ಲಿ ಬಳಸಲಾದ ಪದಗಳು ಮಹಿಳೆಯ ಘನತೆಗೆ ಕುಂದುಂಟು ಮಾಡುವುದಲ್ಲೇ, ಅಗೌರವ ತೋರಿಸುತ್ತವೆ’ ಎಂದೂ ಆಯೋಗ ತನ್ನ ಹೇಳಿಕೆಯಲ್ಲಿ ತಿಳಿಸಿದೆ.</p>.<p class="title">‘ಮಹಿಳೆಯರು ಹೆಚ್ಚು ಸಂಖ್ಯೆಯಲ್ಲಿ ರಾಜಕೀಯ ಕ್ಷೇತ್ರಕ್ಕೆ ಬರಬೇಕೆನ್ನುವ ಆಶಯದಲ್ಲಿ ನಾವಿರುವಾಗ, ಮಹಿಳಾ ನಾಯಕರ ಬಗೆಗಿನ ಅಗೌರವ ಸೂಚಕವಾದ ಹೇಳಿಕೆಗಳು ಶೋಭೆ ತರುವುದಿಲ್ಲ. ಅದರಲ್ಲೂ ಅಂಥದ್ದೊಂದು ಜವಾಬ್ದಾರಿಯುತ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಹೀಗೆ ಮಾತನಾಡುವುದು ದುರದೃಷ್ಟಕರ’ ಎಂದು ಆಯೋಗ ವಿಷಾದಿಸಿದೆ.</p>.<p class="title"><strong>ಏನಿದು ಘಟನೆ?: </strong>ಗ್ವಾಲಿಯರ್ ದಬ್ರಾ ಪಟ್ಟಣದಲ್ಲಿ ಭಾನುವಾರ ನಡೆದ ಚುನಾವಣಾ ಸಭೆಯಲ್ಲಿ, ಕಮಲ್ನಾಥ್ ಅವರು ‘ಎದುರಾಳಿ ‘ಐಟಂ’ ಅಭ್ಯರ್ಥಿಗೆ (ಬಿಜೆಪಿಯ ಇಮಾರ್ತಿ ದೇವಿ) ಹೋಲಿಸಿದರೆ ಕಾಂಗ್ರೆಸ್ ಅಭ್ಯರ್ಥಿಯು ಸರಳ ವ್ಯಕ್ತಿ’ ಎಂದು ಹೇಳಿದ್ದರು.</p>.<p class="title">ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನಿಷ್ಠರಾಗಿರುವ ಇಮಾರ್ತಿ ದೇವಿ ಸೇರಿದಂತೆ 21 ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಈ ಪ್ರಕ್ರಿಯೆಯಲ್ಲಿ ಕಮಲ್ನಾಥ್ ಸರ್ಕಾರವು ಉರುಳಿಬಿದ್ದಿತ್ತು.</p>.<p class="title">ಮಧ್ಯಪ್ರದೇಶದಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ಚುನಾವಣೆ ನಡೆಯಲಿದೆ. ನ. 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>