<p><strong>ಪಟ್ನಾ</strong>: ನಗರದ ಬಿಜೆಪಿ ಕಚೇರಿ ಎದುರು ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಆದರೆ ವಿರೋಧ ಪಕ್ಷಗಳ ನಾಯಕರು 'ಫಲಿತಾಂಶ ಪ್ರಕಟವಾಗಲು ಇನ್ನೂ ಸಮಯವಿದೆ. ಕಾದುನೋಡಿ' ಎಂದು ಕಿವಿಮಾತು ಹೇಳಿದ್ದಾರೆ.</p>.<p>ಆರಂಭದಲ್ಲಿ ಸಾಧಿಸಿದ್ದ ಮುನ್ನಡೆ ಕಾಪಾಡಿಕೊಳ್ಳಲು ಕಾಂಗ್ರೆಸ್ ವಿಫಲವಾಗಿದೆ. ಸ್ಪರ್ಧಿಸಿದ್ದ 70 ಕ್ಷೇತ್ರಗಳ ಪೈಕಿ ಕೇವಲ 20 ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.</p>.<p>ಎಡಪಕ್ಷಗಳು ನಿರೀಕ್ಷೆಗೂ ಮೀರಿದ ಸಾಧನೆ ತೋರಿವೆ. ಸ್ಪರ್ಧಿಸಿದ್ದ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.</p>.<p>90 ಕ್ಷೇತ್ರಗಳಲ್ಲಿ ಗೆಲುವಿನ ಭರವಸೆ ಹುಟ್ಟಿಸಿದ್ದ ಆರ್ಜೆಡಿ ಕೇವಲ 65 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.</p>.<p>ಮುನ್ನಡೆ-ಹಿನ್ನಡೆಯನ್ನೇ ಆಧರಿಸಿ ಚುನಾವಣಾ ಫಲಿತಾಂಶ ನಿರ್ಧರಿಸಲು ಆಗುವುದಿಲ್ಲ ಮತ ಎಣಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ. ಕೋವಿಡ್ ಕಾರಣದಿಂದಾಗಿ ಚುನಾವಣಾ ಆಯೋಗವು ಮತಗಟ್ಟೆಗಳ ಸಂಖ್ಯೆಯನ್ನೂ ಹೆಚ್ಚಿಸಿತ್ತು. ಗ್ರಾಮೀಣ ಪ್ರದೇಶಗಳ ಮತ ಎಣಿಕೆ ಆರಂಭವಾದ ನಂತರ ಚಿತ್ರಣ ಬದಲಾಗಲಿದೆ ಎಂದು ವಿರೋಧ ಪಕ್ಷಗಳ ನಾಯಕರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ನಗರದ ಬಿಜೆಪಿ ಕಚೇರಿ ಎದುರು ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಆದರೆ ವಿರೋಧ ಪಕ್ಷಗಳ ನಾಯಕರು 'ಫಲಿತಾಂಶ ಪ್ರಕಟವಾಗಲು ಇನ್ನೂ ಸಮಯವಿದೆ. ಕಾದುನೋಡಿ' ಎಂದು ಕಿವಿಮಾತು ಹೇಳಿದ್ದಾರೆ.</p>.<p>ಆರಂಭದಲ್ಲಿ ಸಾಧಿಸಿದ್ದ ಮುನ್ನಡೆ ಕಾಪಾಡಿಕೊಳ್ಳಲು ಕಾಂಗ್ರೆಸ್ ವಿಫಲವಾಗಿದೆ. ಸ್ಪರ್ಧಿಸಿದ್ದ 70 ಕ್ಷೇತ್ರಗಳ ಪೈಕಿ ಕೇವಲ 20 ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.</p>.<p>ಎಡಪಕ್ಷಗಳು ನಿರೀಕ್ಷೆಗೂ ಮೀರಿದ ಸಾಧನೆ ತೋರಿವೆ. ಸ್ಪರ್ಧಿಸಿದ್ದ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.</p>.<p>90 ಕ್ಷೇತ್ರಗಳಲ್ಲಿ ಗೆಲುವಿನ ಭರವಸೆ ಹುಟ್ಟಿಸಿದ್ದ ಆರ್ಜೆಡಿ ಕೇವಲ 65 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.</p>.<p>ಮುನ್ನಡೆ-ಹಿನ್ನಡೆಯನ್ನೇ ಆಧರಿಸಿ ಚುನಾವಣಾ ಫಲಿತಾಂಶ ನಿರ್ಧರಿಸಲು ಆಗುವುದಿಲ್ಲ ಮತ ಎಣಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ. ಕೋವಿಡ್ ಕಾರಣದಿಂದಾಗಿ ಚುನಾವಣಾ ಆಯೋಗವು ಮತಗಟ್ಟೆಗಳ ಸಂಖ್ಯೆಯನ್ನೂ ಹೆಚ್ಚಿಸಿತ್ತು. ಗ್ರಾಮೀಣ ಪ್ರದೇಶಗಳ ಮತ ಎಣಿಕೆ ಆರಂಭವಾದ ನಂತರ ಚಿತ್ರಣ ಬದಲಾಗಲಿದೆ ಎಂದು ವಿರೋಧ ಪಕ್ಷಗಳ ನಾಯಕರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>