<p><strong>ಪಟ್ನಾ: </strong>ಮುಖ್ಯಮಂತ್ರಿ ನಿತೀಶ್ಕುಮಾರ್ ನೇತೃತ್ವದಲ್ಲಿ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಯು ರಾಜ್ಯ ಘಟಕದ ಮುಖ್ಯಸ್ಥ ವಸಿಷ್ಠ ನಾರಾಯಣ್ ಸಿಂಗ್ ಹೇಳಿದ್ದಾರೆ.</p>.<p>ವರದಿಗಾರರ ಜತೆ ಮಾತನಾಡಿದ ಅವರು ‘ಇದನ್ನು ನಾನು ಬಹಳ ದಿನಗಳಿಂದಲೂ ಹೇಳುತ್ತಿದ್ದೇನೆ. ರಾಜ್ಯದಲ್ಲಿ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ವಿರೋಧಪಕ್ಷಗಳು ಮತದಾರರನ್ನು ಓಲೈಸಲು ಪ್ರಚಾರ ಕಾರ್ಯವನ್ನು ದಾರಿ ತಪ್ಪಿಸಿದವು ಅಷ್ಟೆ’ ಎಂದು ಹೇಳಿದರು.</p>.<p>ಸರ್ಕಾರವನ್ನು ಮುನ್ನಡೆಸುವುದು ಬಿಜೆಪಿಯೋ ಅಥವಾ ಜೆಡಿಯು ಪಕ್ಷವೋ ಎಂದು ಕೇಳಿದ್ದಕ್ಕೆ ಸರ್ಕಾರವನ್ನು ಯಾರು ಮುನ್ನಡೆಸಬೇಕೆಂಬ ಬಗ್ಗೆ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್ಶಾ ಮತ್ತು ಬಿಜೆಪಿ ಅಧ್ಯಕ್ಷ ನಡ್ಡಾ ಈ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ ಎಂದರು.</p>.<p>ರಾಜ್ಯದಲ್ಲಿ ಎನ್ಡಿಎ ಜಯ ಸಾಧಿಸಿದರೆ ನಿತೀಶ್ಕುಮಾರ್ ಅವರೇ ಸರ್ಕಾರ ಮುನ್ನಡೆಸುವರು ಎಂದು ಮೂವರೂ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ: </strong>ಮುಖ್ಯಮಂತ್ರಿ ನಿತೀಶ್ಕುಮಾರ್ ನೇತೃತ್ವದಲ್ಲಿ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಯು ರಾಜ್ಯ ಘಟಕದ ಮುಖ್ಯಸ್ಥ ವಸಿಷ್ಠ ನಾರಾಯಣ್ ಸಿಂಗ್ ಹೇಳಿದ್ದಾರೆ.</p>.<p>ವರದಿಗಾರರ ಜತೆ ಮಾತನಾಡಿದ ಅವರು ‘ಇದನ್ನು ನಾನು ಬಹಳ ದಿನಗಳಿಂದಲೂ ಹೇಳುತ್ತಿದ್ದೇನೆ. ರಾಜ್ಯದಲ್ಲಿ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ವಿರೋಧಪಕ್ಷಗಳು ಮತದಾರರನ್ನು ಓಲೈಸಲು ಪ್ರಚಾರ ಕಾರ್ಯವನ್ನು ದಾರಿ ತಪ್ಪಿಸಿದವು ಅಷ್ಟೆ’ ಎಂದು ಹೇಳಿದರು.</p>.<p>ಸರ್ಕಾರವನ್ನು ಮುನ್ನಡೆಸುವುದು ಬಿಜೆಪಿಯೋ ಅಥವಾ ಜೆಡಿಯು ಪಕ್ಷವೋ ಎಂದು ಕೇಳಿದ್ದಕ್ಕೆ ಸರ್ಕಾರವನ್ನು ಯಾರು ಮುನ್ನಡೆಸಬೇಕೆಂಬ ಬಗ್ಗೆ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್ಶಾ ಮತ್ತು ಬಿಜೆಪಿ ಅಧ್ಯಕ್ಷ ನಡ್ಡಾ ಈ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ ಎಂದರು.</p>.<p>ರಾಜ್ಯದಲ್ಲಿ ಎನ್ಡಿಎ ಜಯ ಸಾಧಿಸಿದರೆ ನಿತೀಶ್ಕುಮಾರ್ ಅವರೇ ಸರ್ಕಾರ ಮುನ್ನಡೆಸುವರು ಎಂದು ಮೂವರೂ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>