<p><strong>ನವದೆಹಲಿ:</strong> ಹವಾಮಾನ ಬದಲಾವಣೆ ತಡೆಗೆ ಜಾಗತಿಕ ಮಟ್ಟದಲ್ಲಿ ನಿರ್ದಿಷ್ಟವಾದ ಕಾರ್ಯಸೂಚಿ ಅಗತ್ಯ. ಈ ಕಾರ್ಯಸೂಚಿಯನ್ನು ತ್ವರಿತವಾಗಿ ಹಾಗೂ ದೊಡ್ಡಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದರು.</p>.<p>ಅಮೆರಿಕ ಆಯೋಜಿಸಿದ್ದ ವರ್ಚುವಲ್ ಶೃಂಗಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ವಿಶ್ವದ 40 ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>‘ಹವಾಮಾನ ಬದಲಾವಣೆವೊಡ್ಡಿರುವ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಭಾರತ ಕಾರ್ಯಪ್ರವೃತ್ತವಾಗಿದೆ’ ಎಂದು ಹೇಳಿದರು.</p>.<p>‘ಈ ವಿಷಯವಾಗಿ ಅಮೆರಿಕ ಹಾಗೂ ಭಾರತ ಒಟ್ಟಾಗಿ ಕೆಲಸ ಮಾಡುತ್ತಿವೆ. ‘ಇಂಡಿಯಾ–ಯುಎಸ್ ಕ್ಲೈಮೇಟ್ ಆ್ಯಂಡ್ ಕ್ಲೀನ್ ಎನರ್ಜಿ ಅಜೆಂಡಾ 2030 ಪಾರ್ಟನರ್ಶಿಪ್’ ಎಂಬ ಕಾರ್ಯಕ್ರಮವನ್ನು ನಾನು ಮತ್ತು ಅಧ್ಯಕ್ಷ ಜೋ ಬೈಡನ್ ಆರಂಭಿಸಲಿದ್ದೇವೆ’ ಎಂದರು.</p>.<p>‘ಹವಾಮಾನ ಬದಲಾವಣೆ ತಡೆಗೆ ಪೂರಕವಾದಂತಹ ಹೂಡಿಕೆಗೆ ಭಾರತ–ಅಮೆರಿಕ ಪ್ರೋತ್ಸಾಹ, ಶುದ್ಧ ತಂತ್ರಜ್ಞಾನದ ಬಳಕೆಗೆ ಒತ್ತು ನೀಡಲು ಉಭಯ ದೇಶಗಳು ನಿರ್ಧರಿಸಿವೆ’ ಎಂದೂ ಹೇಳಿದರು.</p>.<p>‘ಇಡೀ ವಿಶ್ವವೇ ಈಗ ಕೋವಿಡ್ ಪಿಡುಗಿನ ವಿರುದ್ಧ ಹೋರಾಡುತ್ತಿದೆ. ಇಂಥ ಸಂದರ್ಭದಲ್ಲಿಯೇ ಶೃಂಗಸಭೆಯನ್ನು ಆಯೋಜಿಸಿರುವುದು ಸಕಾಲಿಕವಾಗಿದೆ. ಜಗತ್ತಿಗೆ ಹವಾಮಾನ ಬದಲಾವಣೆ ಒಡ್ಡಿರುವ ಅಪಾಯ ಇನ್ನೂ ಕೊನೆಗೊಂಡಿಲ್ಲ ಎಂಬುದನ್ನು ಈ ಶೃಂಗಸಭೆ ನೆನಪಿಸಿಕೊಟ್ಟಿದೆ’ ಎಂದರು.</p>.<p>‘ಕೋವಿಡ್–19 ಪಿಡುಗು ಕೊನೆಗೊಂಡ ನಂತರ ನಮ್ಮ ಬದುಕನ್ನು ಹೇಗೆ ಕಟ್ಟಿಕೊಳ್ಳಬೇಕು ಎಂಬುದೂ ಮುಖ್ಯ. ಸುಸ್ಥಿರ ಜೀವನಶೈಲಿ ಹಾಗೂ ಹಳೆಯ ಪದ್ಧತಿಗಳ ಅಳವಡಿಕೆ ಕೋವಿಡ್ ನಂತರದ ಆರ್ಥಿಕತೆಯ ತಳಹದಿಯಾಗಿರಬೇಕು’ ಎಂದು ಮೋದಿ ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹವಾಮಾನ ಬದಲಾವಣೆ ತಡೆಗೆ ಜಾಗತಿಕ ಮಟ್ಟದಲ್ಲಿ ನಿರ್ದಿಷ್ಟವಾದ ಕಾರ್ಯಸೂಚಿ ಅಗತ್ಯ. ಈ ಕಾರ್ಯಸೂಚಿಯನ್ನು ತ್ವರಿತವಾಗಿ ಹಾಗೂ ದೊಡ್ಡಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದರು.</p>.<p>ಅಮೆರಿಕ ಆಯೋಜಿಸಿದ್ದ ವರ್ಚುವಲ್ ಶೃಂಗಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ವಿಶ್ವದ 40 ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>‘ಹವಾಮಾನ ಬದಲಾವಣೆವೊಡ್ಡಿರುವ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಭಾರತ ಕಾರ್ಯಪ್ರವೃತ್ತವಾಗಿದೆ’ ಎಂದು ಹೇಳಿದರು.</p>.<p>‘ಈ ವಿಷಯವಾಗಿ ಅಮೆರಿಕ ಹಾಗೂ ಭಾರತ ಒಟ್ಟಾಗಿ ಕೆಲಸ ಮಾಡುತ್ತಿವೆ. ‘ಇಂಡಿಯಾ–ಯುಎಸ್ ಕ್ಲೈಮೇಟ್ ಆ್ಯಂಡ್ ಕ್ಲೀನ್ ಎನರ್ಜಿ ಅಜೆಂಡಾ 2030 ಪಾರ್ಟನರ್ಶಿಪ್’ ಎಂಬ ಕಾರ್ಯಕ್ರಮವನ್ನು ನಾನು ಮತ್ತು ಅಧ್ಯಕ್ಷ ಜೋ ಬೈಡನ್ ಆರಂಭಿಸಲಿದ್ದೇವೆ’ ಎಂದರು.</p>.<p>‘ಹವಾಮಾನ ಬದಲಾವಣೆ ತಡೆಗೆ ಪೂರಕವಾದಂತಹ ಹೂಡಿಕೆಗೆ ಭಾರತ–ಅಮೆರಿಕ ಪ್ರೋತ್ಸಾಹ, ಶುದ್ಧ ತಂತ್ರಜ್ಞಾನದ ಬಳಕೆಗೆ ಒತ್ತು ನೀಡಲು ಉಭಯ ದೇಶಗಳು ನಿರ್ಧರಿಸಿವೆ’ ಎಂದೂ ಹೇಳಿದರು.</p>.<p>‘ಇಡೀ ವಿಶ್ವವೇ ಈಗ ಕೋವಿಡ್ ಪಿಡುಗಿನ ವಿರುದ್ಧ ಹೋರಾಡುತ್ತಿದೆ. ಇಂಥ ಸಂದರ್ಭದಲ್ಲಿಯೇ ಶೃಂಗಸಭೆಯನ್ನು ಆಯೋಜಿಸಿರುವುದು ಸಕಾಲಿಕವಾಗಿದೆ. ಜಗತ್ತಿಗೆ ಹವಾಮಾನ ಬದಲಾವಣೆ ಒಡ್ಡಿರುವ ಅಪಾಯ ಇನ್ನೂ ಕೊನೆಗೊಂಡಿಲ್ಲ ಎಂಬುದನ್ನು ಈ ಶೃಂಗಸಭೆ ನೆನಪಿಸಿಕೊಟ್ಟಿದೆ’ ಎಂದರು.</p>.<p>‘ಕೋವಿಡ್–19 ಪಿಡುಗು ಕೊನೆಗೊಂಡ ನಂತರ ನಮ್ಮ ಬದುಕನ್ನು ಹೇಗೆ ಕಟ್ಟಿಕೊಳ್ಳಬೇಕು ಎಂಬುದೂ ಮುಖ್ಯ. ಸುಸ್ಥಿರ ಜೀವನಶೈಲಿ ಹಾಗೂ ಹಳೆಯ ಪದ್ಧತಿಗಳ ಅಳವಡಿಕೆ ಕೋವಿಡ್ ನಂತರದ ಆರ್ಥಿಕತೆಯ ತಳಹದಿಯಾಗಿರಬೇಕು’ ಎಂದು ಮೋದಿ ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>