ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎ.ಎಸ್.ಬೋಪಣ್ಣ ಅವರ ಪೀಠದ ಮುಂದೆ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈಗ ಕೌನ್ಸೆಲಿಂಗ್ ಸ್ಥಗಿತಗೊಂಡಿದೆ. ಈ ಕಠಿಣ ಸಂದರ್ಭದಲ್ಲಿ ನಮಗೆ ವೈದ್ಯರು ಹೆಚ್ಚಿನ ಸಂಖ್ಯೆಯಲ್ಲಿ ಬೇಕಾಗಿದ್ದಾರೆ. ಹೀಗಿರುವಾಗ ಮೀಸಲಾತಿಗೆ ಸಂಬಂಧಿಸಿದಂತೆ ದೀರ್ಘ ವಾದ, ಪ್ರತಿವಾದಗಳು ಅಗತ್ಯವಿಲ್ಲ ಎಂದು ಕೋರಿದರು.