<p><strong>ನವದೆಹಲಿ: </strong>‘ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರನ್ನು ನಮ್ಮ ಬಂಧು ಬಾಂಧವರು ಎಂದು ಕರೆದಿರುವ ಬಿಜೆಪಿ ಸಂಸದ ವರುಣ್ ಗಾಂಧಿ,‘ ಸರ್ಕಾರ ರೈತರೊಂದಿಗೆ ಮಾತುಕತೆ ಪುನರಾರಂಭಿಸಬೇಕು ಮತ್ತು ಅವರೊಂದಿಗೆ ಒಮ್ಮತ ಅಭಿಪ್ರಾಯಕ್ಕೆ ತಲುಪಬೇಕು’ ಎಂದು ಮನವಿ ಮಾಡಿದರು.</p>.<p>ಉತ್ತರ ಪ್ರದೇಶದ ಮುಜಾಫರ್ನಗರದ ಸರ್ಕಾರಿ ಕಾಲೇಜು ಮೈದಾನದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು(ಎಸ್ಕೆಎಂ) ಮಹಾಪಂಚಾಯತ್ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಭಾರಿ ಸಂಖ್ಯೆಯಲ್ಲಿ ರೈತರು ಭಾಗಿಯಾಗಿದ್ದಾರೆ.</p>.<p>‘ಮುಜಾಫರ್ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ನಮ್ಮ ಬಂಧು ಬಾಂಧವರು. ನಾವು ಅವರ ನೋವನ್ನು ಅರ್ಥ ಮಾಡಿಕೊಳ್ಳಬೇಕು. ಅವರ ದೃಷ್ಟಿಕೋನಗಳನ್ನು ಅರ್ಥೈಸಿಕೊಂಡು ಒಮ್ಮತ ಅಭಿಪ್ರಾಯಕ್ಕೆ ತಲುಪಬೇಕು’ ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ರೈತರ ಪ್ರತಿಭಟನೆಯ ವಿಡಿಯೊವನ್ನು ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರನ್ನು ನಮ್ಮ ಬಂಧು ಬಾಂಧವರು ಎಂದು ಕರೆದಿರುವ ಬಿಜೆಪಿ ಸಂಸದ ವರುಣ್ ಗಾಂಧಿ,‘ ಸರ್ಕಾರ ರೈತರೊಂದಿಗೆ ಮಾತುಕತೆ ಪುನರಾರಂಭಿಸಬೇಕು ಮತ್ತು ಅವರೊಂದಿಗೆ ಒಮ್ಮತ ಅಭಿಪ್ರಾಯಕ್ಕೆ ತಲುಪಬೇಕು’ ಎಂದು ಮನವಿ ಮಾಡಿದರು.</p>.<p>ಉತ್ತರ ಪ್ರದೇಶದ ಮುಜಾಫರ್ನಗರದ ಸರ್ಕಾರಿ ಕಾಲೇಜು ಮೈದಾನದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು(ಎಸ್ಕೆಎಂ) ಮಹಾಪಂಚಾಯತ್ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಭಾರಿ ಸಂಖ್ಯೆಯಲ್ಲಿ ರೈತರು ಭಾಗಿಯಾಗಿದ್ದಾರೆ.</p>.<p>‘ಮುಜಾಫರ್ನಗರದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ನಮ್ಮ ಬಂಧು ಬಾಂಧವರು. ನಾವು ಅವರ ನೋವನ್ನು ಅರ್ಥ ಮಾಡಿಕೊಳ್ಳಬೇಕು. ಅವರ ದೃಷ್ಟಿಕೋನಗಳನ್ನು ಅರ್ಥೈಸಿಕೊಂಡು ಒಮ್ಮತ ಅಭಿಪ್ರಾಯಕ್ಕೆ ತಲುಪಬೇಕು’ ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ರೈತರ ಪ್ರತಿಭಟನೆಯ ವಿಡಿಯೊವನ್ನು ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>