<p><strong>ನವದೆಹಲಿ</strong>: ಇಬ್ಬರು ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್ಟಿಎ) ನಿರ್ದೇಶಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಶುಕ್ರವಾರ ರದ್ದುಪಡಿಸಿತು.</p>.<p>ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠ ಈ ಕುರಿತ ಅರ್ಜಿ ವಿಚಾರಣೆ ನಡೆಸಿತು. ‘ಆ ಇಬ್ಬರು ವಿದ್ಯಾರ್ಥಿಗಳಿಗೆ ಆಗಿರುವ ತೊಂದರೆ ಬಗ್ಗೆ ಅನುಕಂಪ ಇದೆ. ಆದರೆ, ಅವರಿಬ್ಬರಿಗಾಗಿಯೇ ಮರು ಪರೀಕ್ಷೆ ನಡೆಸುವಂತೆ ಎನ್ಟಿಎಗೆ ನಿರ್ದೇಶನ ನೀಡಿ ಆದೇಶಿಸಲಾಗದು’ ಎಂದು ಸ್ಪಷ್ಟಪಡಿಸಿತು.</p>.<p>ವೈಷ್ಣವಿ ಭೋಪಾಲೆ ಹಾಗೂ ಅಭಿಷೇಕ್ ಶಿವಾಜಿ ಎಂಬ ವಿದ್ಯಾರ್ಥಿಗಳು ಮಹಾರಾಷ್ಟ್ರದ ಪರೀಕ್ಷಾ ಕೇಂದ್ರವೊಂದರಲ್ಲಿ ನೀಟ್ ಬರೆದಿದ್ದರು. ಅವರ ಪ್ರಶ್ನೆಪತ್ರಿಕೆಗಳು ಹಾಗೂ ಒಎಂಆರ್ ಪ್ರತಿಗಳು ಪರೀಕ್ಷೆ ಆರಂಭಕ್ಕೂ ಮೊದಲೇ ಬೆರೆತುಹೋಗಿದ್ದವು.</p>.<p>ತಮಗೆ ಮತ್ತೊಮ್ಮೆ ನೀಟ್ ಬರೆಯಲು ಅವಕಾಶ ಕಲ್ಪಿಸುವಂತೆ ಕೋರಿ ಈ ಇಬ್ಬರು ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಎನ್ಟಿಎ ನಿರ್ದೇಶಿಸಿ ಅಕ್ಟೋಬರ್ 20ರಂದು ಆದೇಶಿಸಿತ್ತು. ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಿ ಎನ್ಟಿಎ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇಬ್ಬರು ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್ಟಿಎ) ನಿರ್ದೇಶಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಶುಕ್ರವಾರ ರದ್ದುಪಡಿಸಿತು.</p>.<p>ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್ ಹಾಗೂ ಬಿ.ಆರ್.ಗವಾಯಿ ಅವರಿರುವ ನ್ಯಾಯಪೀಠ ಈ ಕುರಿತ ಅರ್ಜಿ ವಿಚಾರಣೆ ನಡೆಸಿತು. ‘ಆ ಇಬ್ಬರು ವಿದ್ಯಾರ್ಥಿಗಳಿಗೆ ಆಗಿರುವ ತೊಂದರೆ ಬಗ್ಗೆ ಅನುಕಂಪ ಇದೆ. ಆದರೆ, ಅವರಿಬ್ಬರಿಗಾಗಿಯೇ ಮರು ಪರೀಕ್ಷೆ ನಡೆಸುವಂತೆ ಎನ್ಟಿಎಗೆ ನಿರ್ದೇಶನ ನೀಡಿ ಆದೇಶಿಸಲಾಗದು’ ಎಂದು ಸ್ಪಷ್ಟಪಡಿಸಿತು.</p>.<p>ವೈಷ್ಣವಿ ಭೋಪಾಲೆ ಹಾಗೂ ಅಭಿಷೇಕ್ ಶಿವಾಜಿ ಎಂಬ ವಿದ್ಯಾರ್ಥಿಗಳು ಮಹಾರಾಷ್ಟ್ರದ ಪರೀಕ್ಷಾ ಕೇಂದ್ರವೊಂದರಲ್ಲಿ ನೀಟ್ ಬರೆದಿದ್ದರು. ಅವರ ಪ್ರಶ್ನೆಪತ್ರಿಕೆಗಳು ಹಾಗೂ ಒಎಂಆರ್ ಪ್ರತಿಗಳು ಪರೀಕ್ಷೆ ಆರಂಭಕ್ಕೂ ಮೊದಲೇ ಬೆರೆತುಹೋಗಿದ್ದವು.</p>.<p>ತಮಗೆ ಮತ್ತೊಮ್ಮೆ ನೀಟ್ ಬರೆಯಲು ಅವಕಾಶ ಕಲ್ಪಿಸುವಂತೆ ಕೋರಿ ಈ ಇಬ್ಬರು ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಎನ್ಟಿಎ ನಿರ್ದೇಶಿಸಿ ಅಕ್ಟೋಬರ್ 20ರಂದು ಆದೇಶಿಸಿತ್ತು. ಹೈಕೋರ್ಟ್ನ ಈ ಆದೇಶವನ್ನು ಪ್ರಶ್ನಿಸಿ ಎನ್ಟಿಎ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>