‘ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಭಾವಚಿತ್ರವನ್ನಿರಿಸಿರುವವರ ಜನ್ಮದಿನಾಚರಣೆಯ ಸಾಂಪ್ರದಾಯಿಕ ಸಮಾರಂಭದಲ್ಲಿ ಇಂದು ಅಸಾಧಾರಣ ದೃಶ್ಯವನ್ನು ಕಂಡೆ. ಲೋಕಸಭೆಯ ಸ್ಪೀಕರ್, ರಾಜ್ಯಸಭಾಧ್ಯಕ್ಷರು ಗೈರು ಹಾಜರಾಗಿದ್ದರು. ಒಬ್ಬ ಸಚಿವರೂ ಉಪಸ್ಥಿತರಿರಲಿಲ್ಲ. ಇದಕ್ಕಿಂತ ಕ್ರೌರ್ಯ ಇನ್ನೇನಿದೆ?’ ಎಂದು ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದಾರೆ.