‘ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಎನ್ಇಪಿಯನ್ನು ಜಾರಿಗೊಳಿಸಲು ಅವಸರ ಇಲ್ಲ. ಈ ಬಗ್ಗೆ ತಜ್ಞರೊಂದಿಗೆ ಇನ್ನಷ್ಟು ಚರ್ಚೆಗಳು ನಡೆಯಬೇಕಿದೆ. ಎನ್ಇಪಿ ದೇಶದ ಒಕ್ಕೂಟ ವ್ಯವಸ್ಥೆ ಧಕ್ಕೆ ತರುವಂತಿದ್ದು, ರಾಜ್ಯಗಳ ಪಾತ್ರವನ್ನು ದುರ್ಬಲಗೊಳಿಸುವ ಅಂಶವನ್ನು ಹೊಂದಿದೆ. ಸದ್ಯಕ್ಕೆ ನಾವು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ತುರ್ತು ಇದೆ. ಎನ್ಇಪಿ ಜಾರಿಗೊಳಿಸುವ ತುರ್ತು ಈಗಿಲ್ಲ’ ಎಂದು ಚಟರ್ಜಿ ತಿಳಿಸಿದ್ದಾರೆ.