<p class="title"><strong>ಕಠ್ಮಂಡು: </strong>ಭಾರತದ ಮೂರು ಪ್ರಮುಖ ಆಯಕಟ್ಟಿನ ಪ್ರದೇಶಗಳನ್ನು ಒಳಗೊಂಡಿರುವ ಪರಿಷ್ಕೃತ ರಾಜಕೀಯ ನಕ್ಷೆಯನ್ನು ಸೇರಿಸಿದ್ದ ಶಾಲಾಪಠ್ಯ ಪುಸ್ತಕದ ವಿತರಣೆಯನ್ನು ತಕ್ಷಣವೇ ನಿಲ್ಲಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.</p>.<p class="title">9ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿರುವ ‘ನೇಪಾಳದ ಟೆರ್ರಿಟರಿ ಅಂಡ್ ರೀಡಿಂಗ್ ಮೆಟೀರಿಯಲ್ಸ್ ಫಾರ್ ಬಾರ್ಡರ್ ಇಶ್ಯೂಸ್‘ ಪಠ್ಯದಲ್ಲಿಇದನ್ನು ಸೇರಿಸಲಾಗಿತ್ತು. ಪುಸ್ತಕ ವಿತರಣೆ ಮತ್ತು ಮುದ್ರಣವನ್ನು ನಿಲ್ಲಿಸುವಂತೆಶಿಕ್ಷಣ ಸಚಿವಾಲಯಕ್ಕೆ ಸೂಚಿಸಲಾಗಿದೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ.</p>.<p class="title">‘ಶಿಕ್ಷಣ ಸಚಿವಾಲಯಕ್ಕೆ ನೇಪಾಳದ ಭೌಗೋಳಿಕ ಪ್ರದೇಶವನ್ನು ಬದಲಾಯಿಸುವ ಅಧಿಕಾರವಿಲ್ಲ ಮತ್ತು ಪುಸ್ತಕದಲ್ಲಿ ಹಲವು ದೋಷಗಳಿವೆ. ದೋಷ ಸರಿಪಡಿಸಲು ಕ್ರಮ ತೆಗೆದುಕೊಳ್ಳುವಂತೆ ಉನ್ನತ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಭೂ ಸುಧಾರಣೆ ಮತ್ತು ಸಹಕಾರಿ ಸಚಿವಾಲಯದ ವಕ್ತಾರ ಜನಕ್ ರಾಜ್ ಜೋಶಿ ತಿಳಿಸಿದ್ದಾರೆ.</p>.<p class="title">ನೇಪಾಳ ಭೂಪ್ರದೇಶ ಮತ್ತು ಭಾರತದೊಂದಿಗೆ ಗಡಿ ವಿವಾದದ ಕುರಿತ ಐತಿಹಾಸಿಕ ಸಂಗತಿಗಳನ್ನು ಒಳಗೊಂಡಿರುವ110 ಪುಟಗಳ ಪುಸ್ತಕವನ್ನು ನೇಪಾಳ ಶಿಕ್ಷಣ ಸಚಿವರು ಸೆಪ್ಟೆಂಬರ್ 15 ರಂದು ಬಿಡುಗಡೆ ಮಾಡಿದ್ದರು.</p>.<p class="title">ಭಾರತಕ್ಕೆ ಸೇರಿದ ಲಿಪುಲೇಖ್, ಕಾಲಾಪಾನಿ ಮತ್ತು ಲಿಂಪಿಯಾ ಧುರಾ ಪ್ರದೇಶಗಳನ್ನೊಳಗೊಂಡು ತಯಾರಿಸಿದ ಪರಿಷ್ಕೃತ ನಕ್ಷೆಗೆ ನೇಪಾಳದ ಸಂಸತ್ತು ಸರ್ವಾನುಮತದಿಂದ ಅಂಗೀಕರಿಸಿತ್ತು. ಆದರೆ ಈ ಪರಿಷ್ಕೃತ ನಕ್ಷೆಯನ್ನು ಭಾರತ ತಿರಸ್ಕರಿಸಿತ್ತು. ‘ಇದೊಂದು, ಕೃತಕ ವಿಸ್ತರಣೆ. ಸಮ್ಮತವಲ್ಲದ್ದು’ ಎಂದು ಆಕ್ಷೇಪವನ್ನು ಭಾರತ ದಾಖಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕಠ್ಮಂಡು: </strong>ಭಾರತದ ಮೂರು ಪ್ರಮುಖ ಆಯಕಟ್ಟಿನ ಪ್ರದೇಶಗಳನ್ನು ಒಳಗೊಂಡಿರುವ ಪರಿಷ್ಕೃತ ರಾಜಕೀಯ ನಕ್ಷೆಯನ್ನು ಸೇರಿಸಿದ್ದ ಶಾಲಾಪಠ್ಯ ಪುಸ್ತಕದ ವಿತರಣೆಯನ್ನು ತಕ್ಷಣವೇ ನಿಲ್ಲಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.</p>.<p class="title">9ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿರುವ ‘ನೇಪಾಳದ ಟೆರ್ರಿಟರಿ ಅಂಡ್ ರೀಡಿಂಗ್ ಮೆಟೀರಿಯಲ್ಸ್ ಫಾರ್ ಬಾರ್ಡರ್ ಇಶ್ಯೂಸ್‘ ಪಠ್ಯದಲ್ಲಿಇದನ್ನು ಸೇರಿಸಲಾಗಿತ್ತು. ಪುಸ್ತಕ ವಿತರಣೆ ಮತ್ತು ಮುದ್ರಣವನ್ನು ನಿಲ್ಲಿಸುವಂತೆಶಿಕ್ಷಣ ಸಚಿವಾಲಯಕ್ಕೆ ಸೂಚಿಸಲಾಗಿದೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ.</p>.<p class="title">‘ಶಿಕ್ಷಣ ಸಚಿವಾಲಯಕ್ಕೆ ನೇಪಾಳದ ಭೌಗೋಳಿಕ ಪ್ರದೇಶವನ್ನು ಬದಲಾಯಿಸುವ ಅಧಿಕಾರವಿಲ್ಲ ಮತ್ತು ಪುಸ್ತಕದಲ್ಲಿ ಹಲವು ದೋಷಗಳಿವೆ. ದೋಷ ಸರಿಪಡಿಸಲು ಕ್ರಮ ತೆಗೆದುಕೊಳ್ಳುವಂತೆ ಉನ್ನತ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಭೂ ಸುಧಾರಣೆ ಮತ್ತು ಸಹಕಾರಿ ಸಚಿವಾಲಯದ ವಕ್ತಾರ ಜನಕ್ ರಾಜ್ ಜೋಶಿ ತಿಳಿಸಿದ್ದಾರೆ.</p>.<p class="title">ನೇಪಾಳ ಭೂಪ್ರದೇಶ ಮತ್ತು ಭಾರತದೊಂದಿಗೆ ಗಡಿ ವಿವಾದದ ಕುರಿತ ಐತಿಹಾಸಿಕ ಸಂಗತಿಗಳನ್ನು ಒಳಗೊಂಡಿರುವ110 ಪುಟಗಳ ಪುಸ್ತಕವನ್ನು ನೇಪಾಳ ಶಿಕ್ಷಣ ಸಚಿವರು ಸೆಪ್ಟೆಂಬರ್ 15 ರಂದು ಬಿಡುಗಡೆ ಮಾಡಿದ್ದರು.</p>.<p class="title">ಭಾರತಕ್ಕೆ ಸೇರಿದ ಲಿಪುಲೇಖ್, ಕಾಲಾಪಾನಿ ಮತ್ತು ಲಿಂಪಿಯಾ ಧುರಾ ಪ್ರದೇಶಗಳನ್ನೊಳಗೊಂಡು ತಯಾರಿಸಿದ ಪರಿಷ್ಕೃತ ನಕ್ಷೆಗೆ ನೇಪಾಳದ ಸಂಸತ್ತು ಸರ್ವಾನುಮತದಿಂದ ಅಂಗೀಕರಿಸಿತ್ತು. ಆದರೆ ಈ ಪರಿಷ್ಕೃತ ನಕ್ಷೆಯನ್ನು ಭಾರತ ತಿರಸ್ಕರಿಸಿತ್ತು. ‘ಇದೊಂದು, ಕೃತಕ ವಿಸ್ತರಣೆ. ಸಮ್ಮತವಲ್ಲದ್ದು’ ಎಂದು ಆಕ್ಷೇಪವನ್ನು ಭಾರತ ದಾಖಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>