ಈ ನಿರ್ಧಾರವನ್ನು ಬಹುತೇಕ ವಿರೋಧ ಪಕ್ಷಗಳು ಸ್ವಾಗತಿಸಿವೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಇದು ಗಣರಾಜೋತ್ಸವದ ಪರೇಡ್ನಲ್ಲಿ ಪಶ್ಚಿಮ ಬಂಗಾಳಸರ್ಕಾರ ಪ್ರದರ್ಶಿಸಲು ಉದ್ದೇಶಿಸಿದ್ದ ಸ್ತಬ್ಧ ಚಿತ್ರ ತಿರಸ್ಕರಿಸಿದ್ದಕ್ಕೆ ವ್ಯಕ್ತವಾದ ಟೀಕೆಯನ್ನು ಎದುರಿಸಲು ಸರ್ಕಾರ ಕೈಗೊಂಡಿರುವ ಕ್ರಮ’ ಎಂದು ಟೀಕಿಸಿದ್ದಾರೆ.