<p><strong>ಚೆನ್ನೈ</strong>: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ದೀರ್ಘಕಾಲದ ಒಡನಾಡಿ ವಿ.ಕೆ. ಶಶಿಕಲಾ ಅವರು ಸಕ್ರಿಯ ರಾಜಕಾರಣಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ.</p>.<p>ಈ ವಿಚಾರವಾಗಿ ಎಐಎಡಿಎಂಕೆ ಪಕ್ಷದ ಉಚ್ಚಾಟಿತ ಮುಖಂಡರ ಜೊತೆ ಶಶಿಕಲಾ ಅವರು ದೂರವಾಣಿಯಲ್ಲಿ ನಡೆಸಿದ ಸಂಭಾಷಣೆಯ ತುಣುಕು ಹೊರಬಿದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.<br /><br />ಎಐಎಡಿಎಂಕೆಯ 17 ಮುಖಂಡರು ಉಚ್ಚಾಟಣೆಗೊಂಡ ನಂತರ ಹೊರಬಿದ್ದಿರುವ ದೂರವಾಣಿ ಸಂಭಾಷಣೆಯಲ್ಲಿ, ಪಕ್ಷದ ಈಗಿನ ಸ್ಥಿತಿಗತಿಯ ಬಗ್ಗೆ ಶಶಿಕಲಾ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>'ಜಯಲಲಿತಾ ಅವರ ಕನಸನ್ನು ನನಸು ಮಾಡುವ ಜವಾಬ್ದಾರಿ ನನ್ನ ಮೇಲಿದೆ. 100 ವರ್ಷ ತುಂಬಿದರೂ ಎಐಎಡಿಎಂಕೆ ಬಲವಾಗಿರಬೇಕು. ಆ ಕಾರಣ, ನೀವು ನನ್ನೊಂದಿಗಿರಬೇಕು' ಎಂದು ಶಶಿಕಲಾ ಅವರು ಉಚ್ಛಾಟಿತ ನಾಯಕರಿಗೆ ತಿಳಿಸಿದ್ದಾರೆ.</p>.<p>ಕೋವಿಡ್ ಸಾಂಕ್ರಾಮಿಕವು ಹತೋಟೆಗೆ ಬಂದ ನಂತರ ಉಚ್ಛಾಟಿತ ಮುಖಂಡರನ್ನು ಭೇಟಿಯಾಗುವುದಾಗಿ ಶಶಿಕಲಾ ಅವರು ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ದೀರ್ಘಕಾಲದ ಒಡನಾಡಿ ವಿ.ಕೆ. ಶಶಿಕಲಾ ಅವರು ಸಕ್ರಿಯ ರಾಜಕಾರಣಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದಾರೆ.</p>.<p>ಈ ವಿಚಾರವಾಗಿ ಎಐಎಡಿಎಂಕೆ ಪಕ್ಷದ ಉಚ್ಚಾಟಿತ ಮುಖಂಡರ ಜೊತೆ ಶಶಿಕಲಾ ಅವರು ದೂರವಾಣಿಯಲ್ಲಿ ನಡೆಸಿದ ಸಂಭಾಷಣೆಯ ತುಣುಕು ಹೊರಬಿದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.<br /><br />ಎಐಎಡಿಎಂಕೆಯ 17 ಮುಖಂಡರು ಉಚ್ಚಾಟಣೆಗೊಂಡ ನಂತರ ಹೊರಬಿದ್ದಿರುವ ದೂರವಾಣಿ ಸಂಭಾಷಣೆಯಲ್ಲಿ, ಪಕ್ಷದ ಈಗಿನ ಸ್ಥಿತಿಗತಿಯ ಬಗ್ಗೆ ಶಶಿಕಲಾ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>'ಜಯಲಲಿತಾ ಅವರ ಕನಸನ್ನು ನನಸು ಮಾಡುವ ಜವಾಬ್ದಾರಿ ನನ್ನ ಮೇಲಿದೆ. 100 ವರ್ಷ ತುಂಬಿದರೂ ಎಐಎಡಿಎಂಕೆ ಬಲವಾಗಿರಬೇಕು. ಆ ಕಾರಣ, ನೀವು ನನ್ನೊಂದಿಗಿರಬೇಕು' ಎಂದು ಶಶಿಕಲಾ ಅವರು ಉಚ್ಛಾಟಿತ ನಾಯಕರಿಗೆ ತಿಳಿಸಿದ್ದಾರೆ.</p>.<p>ಕೋವಿಡ್ ಸಾಂಕ್ರಾಮಿಕವು ಹತೋಟೆಗೆ ಬಂದ ನಂತರ ಉಚ್ಛಾಟಿತ ಮುಖಂಡರನ್ನು ಭೇಟಿಯಾಗುವುದಾಗಿ ಶಶಿಕಲಾ ಅವರು ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>