<p><strong>ನವದೆಹಲಿ:</strong> ನವದೆಹಲಿಯ ಮುಂಡ್ಕಾ ಎಂಬಲ್ಲಿನ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಈಗಾಗಲೇ 27 ಮಂದಿ ಮೃತಪಟ್ಟಿದ್ದಾರೆ. ಆದರೆ, ಕಟ್ಟಡದಲ್ಲಿದ್ದ 24 ಮಹಿಳೆಯರು ಸೇರಿದಂತೆ 25 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.</p>.<p>ಶುಕ್ರವಾರದ ಘಟನೆಯಲ್ಲಿ ಸಾವಿಗೀಡಾದವರ ಮೃತದೇಹಗಳನ್ನು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಹೀಗಾಗಿ, ನಾಪತ್ತೆಯಾದವರ ಸಂಬಂಧಿಕರು ತಮ್ಮ ಪ್ರೀತಿಪಾತ್ರರನ್ನು ಹುಡುಕಿಕೊಂಡು ಆಸ್ಪತ್ರೆಗೆ ಬರುತ್ತಲೇ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವರದಿಯ ಪ್ರಕಾರ, ಗಾಯಗೊಂಡ ಒಬ್ಬ ವ್ಯಕ್ತಿ ಮಾತ್ರ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.</p>.<p>ಉಳಿದ 13 ಮಂದಿ ಸಣ್ಣಪುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆದು ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 14 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>‘ಬೆಂಕಿ ಹೊತ್ತಿಕೊಂಡಾಗ ಕಟ್ಟಡದಲ್ಲಿದ್ದ ನನ್ನ ಪತ್ನಿ ಸೋನಿಯಾಳನ್ನು ಪತ್ತೆಹಚ್ಚಲು ನಾನು ಪ್ರಯತ್ನಿಸುತ್ತಿದ್ದೇನೆ’ ಎಂದು ಬಿಹಾರ ಮೂಲದ ಮನೋಜ್ ಠಾಕೂರ್ ಅವರು ಐಎಎನ್ಎಸ್ಗೆ ತಿಳಿಸಿದ್ದಾರೆ.</p>.<p>‘ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಸೋನಿ ನನಗೆ ಕರೆ ಮಾಡಿದ್ದಳು. ಆದರೆ ನಂತರ ಆಕೆಯ ಫೋನ್ ಸ್ವಿಚ್ ಆಫ್ ಆಗಿದೆ’ ಎಂದು ಅವರು ಆತಂಕದಲ್ಲೇ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನವದೆಹಲಿಯ ಮುಂಡ್ಕಾ ಎಂಬಲ್ಲಿನ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಈಗಾಗಲೇ 27 ಮಂದಿ ಮೃತಪಟ್ಟಿದ್ದಾರೆ. ಆದರೆ, ಕಟ್ಟಡದಲ್ಲಿದ್ದ 24 ಮಹಿಳೆಯರು ಸೇರಿದಂತೆ 25 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.</p>.<p>ಶುಕ್ರವಾರದ ಘಟನೆಯಲ್ಲಿ ಸಾವಿಗೀಡಾದವರ ಮೃತದೇಹಗಳನ್ನು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಹೀಗಾಗಿ, ನಾಪತ್ತೆಯಾದವರ ಸಂಬಂಧಿಕರು ತಮ್ಮ ಪ್ರೀತಿಪಾತ್ರರನ್ನು ಹುಡುಕಿಕೊಂಡು ಆಸ್ಪತ್ರೆಗೆ ಬರುತ್ತಲೇ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವರದಿಯ ಪ್ರಕಾರ, ಗಾಯಗೊಂಡ ಒಬ್ಬ ವ್ಯಕ್ತಿ ಮಾತ್ರ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.</p>.<p>ಉಳಿದ 13 ಮಂದಿ ಸಣ್ಣಪುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆದು ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 14 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>‘ಬೆಂಕಿ ಹೊತ್ತಿಕೊಂಡಾಗ ಕಟ್ಟಡದಲ್ಲಿದ್ದ ನನ್ನ ಪತ್ನಿ ಸೋನಿಯಾಳನ್ನು ಪತ್ತೆಹಚ್ಚಲು ನಾನು ಪ್ರಯತ್ನಿಸುತ್ತಿದ್ದೇನೆ’ ಎಂದು ಬಿಹಾರ ಮೂಲದ ಮನೋಜ್ ಠಾಕೂರ್ ಅವರು ಐಎಎನ್ಎಸ್ಗೆ ತಿಳಿಸಿದ್ದಾರೆ.</p>.<p>‘ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಸೋನಿ ನನಗೆ ಕರೆ ಮಾಡಿದ್ದಳು. ಆದರೆ ನಂತರ ಆಕೆಯ ಫೋನ್ ಸ್ವಿಚ್ ಆಫ್ ಆಗಿದೆ’ ಎಂದು ಅವರು ಆತಂಕದಲ್ಲೇ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>