‘ಫೆಬ್ರುವರಿ 9ರಂದು ಗೆಳೆಯನಿಗೆ ಕರೆ ಮಾಡಿ ದೆಹಲಿಯ ಉತ್ತಮ್ ನಗರಕ್ಕೆ ಬರಲು ನಿಕ್ಕಿ ಹೇಳಿದ್ದಳು. ಕಾರಿನಲ್ಲಿ ನಿಕ್ಕಿಯನ್ನು ಕೂರಿಸಿಕೊಂಡು ಸಾಹಿಲ್ ಹೊರಟಿದ್ದಾನೆ. ಈ ಸಂದರ್ಭ ಬೇರೆ ಮದುವೆ ಆಗದಂತೆ ನಿಕ್ಕಿ ಒತ್ತಡ ಹಾಕಿದ್ದಾಳೆ. ಅಲ್ಲದೆ, ಗೋವಾಗೆ ತೆರಳಲು ವಿಮಾನದ ಟಿಕೆಟ್ ಸಹ ಬುಕ್ ಮಾಡಿದ್ದಳು. ಈ ಸಂದರ್ಭ ಮಾತಿಗೆ ಮಾತು ಬೆಳೆದು ಕಾರಿನಲ್ಲೇ ಕೊಲೆ ನಡೆದಿದೆ’ಎಂದು ಅಧಿಕಾರಿಗಳು ತಿಳಿಸಿದ್ದಾರೆ.