<p><strong>ನವದೆಹಲಿ:</strong> ‘ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ ಕಾಯ್ದೆಗಳು ರೈತರನ್ನು ವಿವಿಧ ಸಂಕೋಲೆಗಳಿಂದ ಮುಕ್ತಗೊಳಿಸುವ ಜತೆಗೆ, ಅವರಿಗೆ ಹೊಸ ಹಕ್ಕುಗಳು ಮತ್ತು ಅವಕಾಶಗಳನ್ನು ತೆರೆದಿಡಲಿವೆ‘ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು.</p>.<p>ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ವಿವಿಧ ಭಾಗಗಳ ರೈತರು ‘ದೆಹಲಿ ಚಲೋ‘ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಭಾನುವಾರ ತಮ್ಮ ಮಾಸಿಕ ಕಾರ್ಯಕ್ರಮ ‘ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮ‘ದಲ್ಲಿ ಕೃಷಿ ಕಾಯ್ದೆಗಳ ಕುರಿತು ಮಾತನಾಡಿದರು.</p>.<p>ಇತ್ತೀಚೆಗಿನ ಕೃಷಿ ಕಾಯ್ದೆಗಳು ಅಲ್ಪಾವಧಿಯಲ್ಲಿಯೇ ರೈತರ ತೊಂದರೆಗಳನ್ನು ತಗ್ಗಿಸಲು ಪ್ರಾರಂಭಿಸಿವೆ ಎಂದ ಪ್ರಧಾನಿಯವರು ಮಹಾರಾಷ್ಟ್ರದ ರೈತರೊಬ್ಬರು ಹೊಸ ಕಾಯ್ದೆಗಳಲ್ಲಿರುವ ನಿಬಂಧನೆಗಳನ್ನು ಬಳಸಿಕೊಂಡರು ವ್ಯಾಪಾರಿಯಿಂದ ತಮಗೆ ಬರಬೇಕಾದ ಹಣವನ್ನು ಪಡೆದುಕೊಂಡಿರುವ ಉದಾಹರಣೆಯನ್ನು ಉಲ್ಲೇಖಿಸಿದರು.</p>.<p>‘ಹಲವು ದಶಕಗಳಿಂದ ರೈತರು ಸರ್ಕಾರಗಳ ಎದುರು ಇಡುತ್ತಿದ್ದ ಬೇಡಿಕೆಗಳು ಅಥವಾ ರಾಜಕೀಯ ಪಕ್ಷಗಳು ರೈತರಿಗೆ ನೀಡುತ್ತಿದ್ದ ಭರವಸೆಗಳು ಈಗ ಈಡೇರಿವೆ. ಇತ್ತೀಚೆಗೆ ಸುಧೀರ್ಘ ಚರ್ಚೆಗಳ ನಂತರ ಸಂಸತ್ತು ಈ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದೆ‘ ಎಂದು ಪ್ರಧಾನಿ ಹೇಳಿದರು.</p>.<p>‘ಈ ಹೊಸ ಕಾಯ್ದೆಗಳು ರೈತರನ್ನು ವಿವಿಧ ಸಂಕೋಲೆಗಳಿಂದ ಮುಕ್ತಗೊಳಿಸುವ ಜತೆಗೆ, ಅವರಿಗೆ ಹೊಸ ಹಕ್ಕುಗಳು ಮತ್ತು ಅವಕಾಶಗಳನ್ನೂ ನೀಡಿವೆ. ಈ ಸೌಲಭ್ಯಗಳು ಕಡಿಮೆ ಅವಧಿಯಲ್ಲಿ ರೈತರ ಸಮಸ್ಯೆಗಳನ್ನು ಕಡಿಮೆ ಮಾಡಲಿವೆ‘ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಕೃಷಿ ಕಾಯ್ದೆಗಳು ರೈತರನ್ನು ವಿವಿಧ ಸಂಕೋಲೆಗಳಿಂದ ಮುಕ್ತಗೊಳಿಸುವ ಜತೆಗೆ, ಅವರಿಗೆ ಹೊಸ ಹಕ್ಕುಗಳು ಮತ್ತು ಅವಕಾಶಗಳನ್ನು ತೆರೆದಿಡಲಿವೆ‘ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು.</p>.<p>ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ವಿವಿಧ ಭಾಗಗಳ ರೈತರು ‘ದೆಹಲಿ ಚಲೋ‘ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಭಾನುವಾರ ತಮ್ಮ ಮಾಸಿಕ ಕಾರ್ಯಕ್ರಮ ‘ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮ‘ದಲ್ಲಿ ಕೃಷಿ ಕಾಯ್ದೆಗಳ ಕುರಿತು ಮಾತನಾಡಿದರು.</p>.<p>ಇತ್ತೀಚೆಗಿನ ಕೃಷಿ ಕಾಯ್ದೆಗಳು ಅಲ್ಪಾವಧಿಯಲ್ಲಿಯೇ ರೈತರ ತೊಂದರೆಗಳನ್ನು ತಗ್ಗಿಸಲು ಪ್ರಾರಂಭಿಸಿವೆ ಎಂದ ಪ್ರಧಾನಿಯವರು ಮಹಾರಾಷ್ಟ್ರದ ರೈತರೊಬ್ಬರು ಹೊಸ ಕಾಯ್ದೆಗಳಲ್ಲಿರುವ ನಿಬಂಧನೆಗಳನ್ನು ಬಳಸಿಕೊಂಡರು ವ್ಯಾಪಾರಿಯಿಂದ ತಮಗೆ ಬರಬೇಕಾದ ಹಣವನ್ನು ಪಡೆದುಕೊಂಡಿರುವ ಉದಾಹರಣೆಯನ್ನು ಉಲ್ಲೇಖಿಸಿದರು.</p>.<p>‘ಹಲವು ದಶಕಗಳಿಂದ ರೈತರು ಸರ್ಕಾರಗಳ ಎದುರು ಇಡುತ್ತಿದ್ದ ಬೇಡಿಕೆಗಳು ಅಥವಾ ರಾಜಕೀಯ ಪಕ್ಷಗಳು ರೈತರಿಗೆ ನೀಡುತ್ತಿದ್ದ ಭರವಸೆಗಳು ಈಗ ಈಡೇರಿವೆ. ಇತ್ತೀಚೆಗೆ ಸುಧೀರ್ಘ ಚರ್ಚೆಗಳ ನಂತರ ಸಂಸತ್ತು ಈ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದೆ‘ ಎಂದು ಪ್ರಧಾನಿ ಹೇಳಿದರು.</p>.<p>‘ಈ ಹೊಸ ಕಾಯ್ದೆಗಳು ರೈತರನ್ನು ವಿವಿಧ ಸಂಕೋಲೆಗಳಿಂದ ಮುಕ್ತಗೊಳಿಸುವ ಜತೆಗೆ, ಅವರಿಗೆ ಹೊಸ ಹಕ್ಕುಗಳು ಮತ್ತು ಅವಕಾಶಗಳನ್ನೂ ನೀಡಿವೆ. ಈ ಸೌಲಭ್ಯಗಳು ಕಡಿಮೆ ಅವಧಿಯಲ್ಲಿ ರೈತರ ಸಮಸ್ಯೆಗಳನ್ನು ಕಡಿಮೆ ಮಾಡಲಿವೆ‘ ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>