<p><strong>ನವದೆಹಲಿ:</strong> ರೈತರಿಗೆ ಅನುಕೂಲವಾಗಲೆಂದೇ ಹೊಸ ಕೃಷಿ ಕಾನೂನುಗಳನ್ನು ರೂಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಎಫ್ಐಸಿಸಿಐ) ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು, ‘ಹೊಸ ಸುಧಾರಣೆಗಳು ರೈತರಿಗೆ ಹೊಸ ಮಾರುಕಟ್ಟೆಯನ್ನು ದೊರಕಿಸಿಕೊಡಲಿವೆ. ರೈತರಿಗೆ ತಂತ್ರಜ್ಞಾನ ಲಭ್ಯವಾಗುವಂತೆ ಮಾಡಲಿವೆ. ರೈತರಿಗೆ ನೆರವಾಗುವಂತಹ ಹೂಡಿಕೆಗಳನ್ನು ಕೃಷಿ ಕ್ಷೇತ್ರಕ್ಕೆ ಸೆಳೆಯಲಿದೆ’ ಎಂದು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/home-minister-amit-shah-meets-security-officials-to-pre-empt-any-chances-of-violence-in-delhi-786503.html" itemprop="url">ದೆಹಲಿ ಪ್ರತಿಭಟನೆ: ಪೊಲೀಸ್, ರಕ್ಷಣಾಧಿಕಾರಿಗಳೊಂದಿಗೆ ಅಮಿತ್ ಶಾ ಮಾತುಕತೆ</a></p>.<p>‘ಕೃಷಿ ಮತ್ತು ಇತರ ಕ್ಷೇತ್ರಗಳ ನಡುವೆ ಅಡ್ಡಗೋಡೆ ಇರುವುದನ್ನು ಗಮನಿಸಿದ್ದೆವು. ಅದು ಕೃಷಿ ಮೂಲಸೌಕರ್ಯ, ಆಹಾರ ಸಂಸ್ಕರಣೆ, ಸಂಗ್ರಹಾಗಾರ ಅಥವಾ ಶೀಥಲೀಕರಣ ಯಾವುದರ ನಡುವೆಯೇ ಇರಬಹುದು. ಎಲ್ಲ ಅಡೆತಡೆಗಳನ್ನು ಈಗ ತೆರವುಗೊಳಿಸಲಾಗಿದೆ’ ಎಂದು ಮೋದಿ ಹೇಳಿದ್ದಾರೆ.</p>.<p>ನೂತನ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿರುವ ಮಧ್ಯೆಯೇ ಪ್ರಧಾನಿಯವರಿಂದ ಈ ಹೇಳಿಕೆ ಮೂಡಿಬಂದಿದೆ. ಹೊಸ ಕಾಯ್ದೆಗಳಿಂದ ಕನಿಷ್ಠ ಬೆಂಬಲ ಬೆಲೆ ರದ್ದಾಗಲಿದೆ, ಆದಾಯಕ್ಕೆ ಹೊಡೆತ ಬೀಳಲಿದೆ ಎಂದು ರೈತರು ಆರೋಪಿಸುತ್ತಿದ್ದಾರೆ. ಆದರೆ, ಕನಿಷ್ಠ ಬೆಂಬಲ ಬೆಲೆ ಮುಂದುವರಿಯಲಿದೆ ಎಂದು ಸರ್ಕಾರ ಹೇಳುತ್ತಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/sports/cricket/yuvraj-singh-prays-swift-resolution-ongoing-talks-between-farmers-and-govt-786514.html" itemprop="url">ರೈತರಿಗೆ ಯುವಿ ಬೆಂಬಲ; ಬಿಕ್ಕಟ್ಟು ಶಾಂತಿಯುತವಾಗಿ ಬಗೆಹರಿಯಲು ಪ್ರಾರ್ಥನೆ</a></p>.<p>ಈ ಮಧ್ಯೆ, ದೆಹಲಿ ಗಡಿ ಪ್ರದೇಶಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ರೈತ ಸಂಘಟನೆಗಳು ಜೈಪುರ್ – ದೆಹಲಿ ಮತ್ತು ದೆಹಲಿ –ಆಗ್ರಾ ಎಸ್ಪ್ರೆಸ್ವೇಗಳನ್ನು ಬಂದ್ ಮಾಡುವುದಾಗಿ ಎಚ್ಚರಿಸಿರುವ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರೈತರಿಗೆ ಅನುಕೂಲವಾಗಲೆಂದೇ ಹೊಸ ಕೃಷಿ ಕಾನೂನುಗಳನ್ನು ರೂಪಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಎಫ್ಐಸಿಸಿಐ) ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು, ‘ಹೊಸ ಸುಧಾರಣೆಗಳು ರೈತರಿಗೆ ಹೊಸ ಮಾರುಕಟ್ಟೆಯನ್ನು ದೊರಕಿಸಿಕೊಡಲಿವೆ. ರೈತರಿಗೆ ತಂತ್ರಜ್ಞಾನ ಲಭ್ಯವಾಗುವಂತೆ ಮಾಡಲಿವೆ. ರೈತರಿಗೆ ನೆರವಾಗುವಂತಹ ಹೂಡಿಕೆಗಳನ್ನು ಕೃಷಿ ಕ್ಷೇತ್ರಕ್ಕೆ ಸೆಳೆಯಲಿದೆ’ ಎಂದು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/home-minister-amit-shah-meets-security-officials-to-pre-empt-any-chances-of-violence-in-delhi-786503.html" itemprop="url">ದೆಹಲಿ ಪ್ರತಿಭಟನೆ: ಪೊಲೀಸ್, ರಕ್ಷಣಾಧಿಕಾರಿಗಳೊಂದಿಗೆ ಅಮಿತ್ ಶಾ ಮಾತುಕತೆ</a></p>.<p>‘ಕೃಷಿ ಮತ್ತು ಇತರ ಕ್ಷೇತ್ರಗಳ ನಡುವೆ ಅಡ್ಡಗೋಡೆ ಇರುವುದನ್ನು ಗಮನಿಸಿದ್ದೆವು. ಅದು ಕೃಷಿ ಮೂಲಸೌಕರ್ಯ, ಆಹಾರ ಸಂಸ್ಕರಣೆ, ಸಂಗ್ರಹಾಗಾರ ಅಥವಾ ಶೀಥಲೀಕರಣ ಯಾವುದರ ನಡುವೆಯೇ ಇರಬಹುದು. ಎಲ್ಲ ಅಡೆತಡೆಗಳನ್ನು ಈಗ ತೆರವುಗೊಳಿಸಲಾಗಿದೆ’ ಎಂದು ಮೋದಿ ಹೇಳಿದ್ದಾರೆ.</p>.<p>ನೂತನ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿರುವ ಮಧ್ಯೆಯೇ ಪ್ರಧಾನಿಯವರಿಂದ ಈ ಹೇಳಿಕೆ ಮೂಡಿಬಂದಿದೆ. ಹೊಸ ಕಾಯ್ದೆಗಳಿಂದ ಕನಿಷ್ಠ ಬೆಂಬಲ ಬೆಲೆ ರದ್ದಾಗಲಿದೆ, ಆದಾಯಕ್ಕೆ ಹೊಡೆತ ಬೀಳಲಿದೆ ಎಂದು ರೈತರು ಆರೋಪಿಸುತ್ತಿದ್ದಾರೆ. ಆದರೆ, ಕನಿಷ್ಠ ಬೆಂಬಲ ಬೆಲೆ ಮುಂದುವರಿಯಲಿದೆ ಎಂದು ಸರ್ಕಾರ ಹೇಳುತ್ತಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/sports/cricket/yuvraj-singh-prays-swift-resolution-ongoing-talks-between-farmers-and-govt-786514.html" itemprop="url">ರೈತರಿಗೆ ಯುವಿ ಬೆಂಬಲ; ಬಿಕ್ಕಟ್ಟು ಶಾಂತಿಯುತವಾಗಿ ಬಗೆಹರಿಯಲು ಪ್ರಾರ್ಥನೆ</a></p>.<p>ಈ ಮಧ್ಯೆ, ದೆಹಲಿ ಗಡಿ ಪ್ರದೇಶಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ರೈತ ಸಂಘಟನೆಗಳು ಜೈಪುರ್ – ದೆಹಲಿ ಮತ್ತು ದೆಹಲಿ –ಆಗ್ರಾ ಎಸ್ಪ್ರೆಸ್ವೇಗಳನ್ನು ಬಂದ್ ಮಾಡುವುದಾಗಿ ಎಚ್ಚರಿಸಿರುವ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>