ರಾಜ್ಯಗಳ ಅಧಿಕಾರವನ್ನು ಈ ಮಸೂದೆಗಳ ಮೂಲಕ ಮೊಟಕುಗೊಳಿಸುತ್ತಿರುವ ಕಾರ್ಮಿಕ ವಿರೋಧಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿರುವ ಅವರು, ಎಲ್ಲ ಪಕ್ಷಗಳು ಸಂಹಿತೆಗಳನ್ನು ವಿರೋಧಿಸುತ್ತಿರುವಾಗ, ವಿರೋಧ ಪಕ್ಷಗಳ ದನಿಯನ್ನು ಮೋದಿ ನೇತೃತ್ವದ ಸರ್ಕಾರ ಆಲಿಸುತ್ತಿಲ್ಲ. ಅವರಿಗೆ ಕೇಳುತ್ತಿರುವುದು ಬರೀ ಬಂಡವಾಳಶಾಹಿಗಳ ದನಿಯಷ್ಟೇ ಎಂದು ಕಿಡಿಕಾರಿದ್ದಾರೆ.