<p><strong>ಮುಂಬೈ:</strong> ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪತ್ತೆಯಾದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಎನ್ಸಿಬಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಆರೋಪದ ತನಿಖೆಯ ವೇಳೆ ಕೇಳಿಬಂದಿರುವ ಸುನೀಲ್ ಪಾಟೀಲ್ ಅವರು ಎನ್ಸಿಪಿ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎಂದು ಬಿಜೆಪಿ ನಾಯಕ ಮೋಹಿತ್ ಭಾರತೀಯ ಆರೋಪಿಸಿದ್ದಾರೆ.</p>.<p>'ಈ ಸಂಪೂರ್ಣ ಪಿತೂರಿಯ ಮಾಸ್ಟರ್ ಮೈಂಡ್ ಸುನೀಲ್ ಪಾಟೀಲ್. ಪಾಟೀಲ್ ಕಳೆದ 20 ವರ್ಷಗಳಿಂದಲೂ ಎನ್ಸಿಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಅವರು ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಮತ್ತು ಅವರ ಮಗ ಹೃಷಿಕೇಶ್ ಅವರ ಸ್ನೇಹಿತ. ಅವರು ವರ್ಗಾವಣೆ-ಪೋಸ್ಟಿಂಗ್ ದಂಧೆಗಳನ್ನು ನಡೆಸುತ್ತಿದ್ದರು' ಎಂದು ಪತ್ರಿಕಾಗೋಷ್ಠಿಯಲ್ಲಿ ಭಾರತಿಯ ಆರೋಪಿಸಿದರು.</p>.<p>ಸುನೀಲ್ ಪಾಟೀಲ್ ಅವರು ಸ್ಯಾಮ್ ಡಿಸೋಜಾ ಮತ್ತು ಕಿರಣ್ ಗೋಸಾವಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅವರು ದೂರಿದರು.</p>.<p>ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಎನ್ಸಿಪಿ ನಾಯಕನವಾಬ್ ಮಲಿಕ್, 'ಸಮೀರ್ ದಾವೂದ್ ವಾಂಖೆಡೆ ಅವರ ಖಾಸಗಿ ಸೇನೆಯ ಸದಸ್ಯರೊಬ್ಬರು ದಾರಿ ತಪ್ಪಿಸುವ ಮತ್ತು ಸತ್ಯವನ್ನು ಮರೆಮಾಚುವ ಉದ್ದೇಶದಿಂದ ಈಗಷ್ಟೆ ನಡೆಸಿದ ಪತ್ರಿಕಾಗೋಷ್ಠಿ ವಿಫಲವಾಗಿದೆ. ನಾನು ನಾಳೆ ಸತ್ಯವನ್ನು ಬಹಿರಂಗಪಡಿಸುತ್ತೇನೆ' ಎಂದು ಹೇಳಿದರು.</p>.<p>ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ಪದಾರ್ಥ ನಿಯಂತ್ರಣ ಬ್ಯೂರೊದ (ಎನ್ಸಿಬಿ) ಅಧಿಕಾರಿಗಳು ಬಾಲಿವುಡ್ ಸೂಪರ್ಸ್ಟಾರ್ ಶಾರುಕ್ ಖಾನ್ ಅವರಿಂದ ಆರೋಪಿಯಾದ ಅವರ ಮಗ ಆರ್ಯನ್ ಖಾನ್ ಬಿಡುಗಡೆಗೆ ₹25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಪ್ರಕರಣದ ಸಾಕ್ಷಿಯಾಗಿರುವ ಪ್ರಭಾಕರ ಸೈಲ್ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪತ್ತೆಯಾದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಎನ್ಸಿಬಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಆರೋಪದ ತನಿಖೆಯ ವೇಳೆ ಕೇಳಿಬಂದಿರುವ ಸುನೀಲ್ ಪಾಟೀಲ್ ಅವರು ಎನ್ಸಿಪಿ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎಂದು ಬಿಜೆಪಿ ನಾಯಕ ಮೋಹಿತ್ ಭಾರತೀಯ ಆರೋಪಿಸಿದ್ದಾರೆ.</p>.<p>'ಈ ಸಂಪೂರ್ಣ ಪಿತೂರಿಯ ಮಾಸ್ಟರ್ ಮೈಂಡ್ ಸುನೀಲ್ ಪಾಟೀಲ್. ಪಾಟೀಲ್ ಕಳೆದ 20 ವರ್ಷಗಳಿಂದಲೂ ಎನ್ಸಿಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಅವರು ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಮತ್ತು ಅವರ ಮಗ ಹೃಷಿಕೇಶ್ ಅವರ ಸ್ನೇಹಿತ. ಅವರು ವರ್ಗಾವಣೆ-ಪೋಸ್ಟಿಂಗ್ ದಂಧೆಗಳನ್ನು ನಡೆಸುತ್ತಿದ್ದರು' ಎಂದು ಪತ್ರಿಕಾಗೋಷ್ಠಿಯಲ್ಲಿ ಭಾರತಿಯ ಆರೋಪಿಸಿದರು.</p>.<p>ಸುನೀಲ್ ಪಾಟೀಲ್ ಅವರು ಸ್ಯಾಮ್ ಡಿಸೋಜಾ ಮತ್ತು ಕಿರಣ್ ಗೋಸಾವಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅವರು ದೂರಿದರು.</p>.<p>ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಎನ್ಸಿಪಿ ನಾಯಕನವಾಬ್ ಮಲಿಕ್, 'ಸಮೀರ್ ದಾವೂದ್ ವಾಂಖೆಡೆ ಅವರ ಖಾಸಗಿ ಸೇನೆಯ ಸದಸ್ಯರೊಬ್ಬರು ದಾರಿ ತಪ್ಪಿಸುವ ಮತ್ತು ಸತ್ಯವನ್ನು ಮರೆಮಾಚುವ ಉದ್ದೇಶದಿಂದ ಈಗಷ್ಟೆ ನಡೆಸಿದ ಪತ್ರಿಕಾಗೋಷ್ಠಿ ವಿಫಲವಾಗಿದೆ. ನಾನು ನಾಳೆ ಸತ್ಯವನ್ನು ಬಹಿರಂಗಪಡಿಸುತ್ತೇನೆ' ಎಂದು ಹೇಳಿದರು.</p>.<p>ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ಪದಾರ್ಥ ನಿಯಂತ್ರಣ ಬ್ಯೂರೊದ (ಎನ್ಸಿಬಿ) ಅಧಿಕಾರಿಗಳು ಬಾಲಿವುಡ್ ಸೂಪರ್ಸ್ಟಾರ್ ಶಾರುಕ್ ಖಾನ್ ಅವರಿಂದ ಆರೋಪಿಯಾದ ಅವರ ಮಗ ಆರ್ಯನ್ ಖಾನ್ ಬಿಡುಗಡೆಗೆ ₹25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಪ್ರಕರಣದ ಸಾಕ್ಷಿಯಾಗಿರುವ ಪ್ರಭಾಕರ ಸೈಲ್ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>