<p><strong>ನವದೆಹಲಿ</strong>: ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಅವರನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.</p>.<p>‘ಇಂಥ ಸುಳ್ಳು ಸುದ್ದಿ ಹರಿಡಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ‘ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಸುಳ್ಳು ಸುದ್ದಿ! ರಾಕೇಶ್ ಟಿಕಾಯತ್ ಬಂಧನಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಮಾಹಿತಿ ‘ಸುಳ್ಳು ಸುದ್ದಿ‘ಯಾಗಿದೆ. ಇಂಥ ಸುಳ್ಳು ಸುದ್ದಿಗಳಿಂದ ದೂರವಿರಿ. ಇಂಥವುಗಳನ್ನು ನಂಬಬೇಡಿ. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ‘ ಎಂದು ನವದೆಹಲಿಯ ಪೂರ್ವ ವಿಭಾಗದ ಡಿಸಿಪಿ ಕಶ್ಯಪ್ ಟ್ವೀಟ್ ಮಾಡಿದ್ದಾರೆ.</p>.<p>ಭಾರತೀಯ ಕಿಸಾನ್ ಯೂನಿಯನ್ ಮಾಧ್ಯಮ ವಿಭಾಗದ ಉಸ್ತುವಾರಿ ಧರ್ಮೇಂದ್ರ ಮಲಿಕ್ ಅವರು ‘ರಾಕೇಶ್ ಟಿಕಾಯತ್ ಅವರನ್ನು ಬಂಧಿಸಿಲ್ಲ‘ ಎಂದು ತಿಳಿಸಿದ್ದಾರೆ.</p>.<p>‘ರಾಕೇಶ್ ಟಿಕಾಯತ್ ಅವರನ್ನು ಪೊಲೀಸರು ಬಂಧಿಸಿಲ್ಲ. ಅವರು ಸದ್ಯ ಗಾಜಿಪುರದ ಪ್ರತಿಭಟನಾ ಸ್ಥಳದಲ್ಲಿದ್ದು, ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಯಾವುದೇ ಸಂಘರ್ಷ ನಡೆದಿಲ್ಲ‘ ಎಂದು ಮಲಿಕ್ ಸ್ಪಷ್ಟಪಡಿಸಿದ್ದಾರೆ.</p>.<p>ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ರೈತ ಸಂಘಟನೆಗಳು ಕರೆ ನೀಡಿದ್ದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಶನಿವಾರ ದೆಹಲಿಯಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಅವರನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.</p>.<p>‘ಇಂಥ ಸುಳ್ಳು ಸುದ್ದಿ ಹರಿಡಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ‘ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಸುಳ್ಳು ಸುದ್ದಿ! ರಾಕೇಶ್ ಟಿಕಾಯತ್ ಬಂಧನಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಮಾಹಿತಿ ‘ಸುಳ್ಳು ಸುದ್ದಿ‘ಯಾಗಿದೆ. ಇಂಥ ಸುಳ್ಳು ಸುದ್ದಿಗಳಿಂದ ದೂರವಿರಿ. ಇಂಥವುಗಳನ್ನು ನಂಬಬೇಡಿ. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ‘ ಎಂದು ನವದೆಹಲಿಯ ಪೂರ್ವ ವಿಭಾಗದ ಡಿಸಿಪಿ ಕಶ್ಯಪ್ ಟ್ವೀಟ್ ಮಾಡಿದ್ದಾರೆ.</p>.<p>ಭಾರತೀಯ ಕಿಸಾನ್ ಯೂನಿಯನ್ ಮಾಧ್ಯಮ ವಿಭಾಗದ ಉಸ್ತುವಾರಿ ಧರ್ಮೇಂದ್ರ ಮಲಿಕ್ ಅವರು ‘ರಾಕೇಶ್ ಟಿಕಾಯತ್ ಅವರನ್ನು ಬಂಧಿಸಿಲ್ಲ‘ ಎಂದು ತಿಳಿಸಿದ್ದಾರೆ.</p>.<p>‘ರಾಕೇಶ್ ಟಿಕಾಯತ್ ಅವರನ್ನು ಪೊಲೀಸರು ಬಂಧಿಸಿಲ್ಲ. ಅವರು ಸದ್ಯ ಗಾಜಿಪುರದ ಪ್ರತಿಭಟನಾ ಸ್ಥಳದಲ್ಲಿದ್ದು, ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಯಾವುದೇ ಸಂಘರ್ಷ ನಡೆದಿಲ್ಲ‘ ಎಂದು ಮಲಿಕ್ ಸ್ಪಷ್ಟಪಡಿಸಿದ್ದಾರೆ.</p>.<p>ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ರೈತ ಸಂಘಟನೆಗಳು ಕರೆ ನೀಡಿದ್ದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಶನಿವಾರ ದೆಹಲಿಯಾದ್ಯಂತ ಭದ್ರತೆಯನ್ನು ಹೆಚ್ಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>