<p><strong>ನವದೆಹಲಿ: </strong>ನಿರ್ಮಾಣ ಯೋಜನೆಗಳಲ್ಲಿ ಪರಿಸರ ರಕ್ಷಣೆಗೆ ಸಂಬಂಧಿಸಿದಂತೆ ಮಾದರಿ ಕಾರ್ಯವಿಧಾನಗಳನ್ನು (ಎಸ್ಒಪಿ) ರೂಪಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್ಜಿಟಿ) ಎಲ್ಲ ರಾಜ್ಯಗಳಿಗೆ ಸೂಚಿಸಿದೆ.</p>.<p>ನಿರ್ಮಾಣ ಯೋಜನೆಗಳಲ್ಲಿ ನಿರಂತರವಾಗಿ ಪರಿಸರ ರಕ್ಷಣೆಯ ನಿಯಮಗಳನ್ನು ಉಲ್ಲಂಘಿಸುತ್ತಿರುವುದನ್ನು ಪರಿಗಣಿಸಿ ಎನ್ಜಿಟಿ ಈ ನಿರ್ದೇಶನ ನೀಡಿದೆ.</p>.<p>ಪುಣೆಯಲ್ಲಿ ‘ಗಂಗಾ ಅಲ್ಟಸ್’ ನಿರ್ಮಾಣ ಯೋಜನೆ ಕೈಗೊಳ್ಳಲು ಮಹಾರಾಷ್ಟ್ರದ ಪರಿಸರ ಪರಿಣಾಮ ಪರಿಶೀಲನಾ ಪ್ರಾಧಿಕಾರ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ಎನ್ಜಿಟಿ ಈ ನಿರ್ದೇಶನ ನೀಡಿದೆ.</p>.<p>‘ಮುಂಚಿತವಾಗಿಯೇ ಪರಿಸರ ಅನುಮೋದನೆ ಪಡೆಯದೆಯೇ ನಿರ್ಮಾಣ ಯೋಜನೆಗಳನ್ನು ಪೂರ್ಣಗೊಳಿಸುತ್ತಿರುವ ಪ್ರಕರಣಗಳು ನಡೆಯುತ್ತಿವೆ. ಹೀಗಾಗಿ, ಪರಿಸರ ಅನುಮೋದನೆ ನೀಡಲು ಸಮರ್ಪಕವಾದ ಮಾದರಿ ಕಾರ್ಯವಿಧಾನಗಳನ್ನು ರೂಪಿಸಬೇಕು. ಪರಿಸರ ಸಚಿವಾಲಯ ಸಹ ಈ ವಿಷಯವನ್ನು ಪರಿಗಣಿಸಿ ರಾಜ್ಯಗಳಿಗೆ ಪರಿಸರಕ್ಕೆ ಸಂಬಂಧಿಸಿದ ಪ್ರಾಧಿಕಾರಗಳಿಗೆ ಸುತ್ತೋಲೆಯನ್ನು ಕಳುಹಿಸಬೇಕು’ ಎಂದು ಎನ್ಜಿಟಿ ತಿಳಿಸಿದೆ.</p>.<p>‘ಗಂಗಾ ಅಲ್ಟಸ್’ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಪರಿಶೀಲನೆ ಕೈಗೊಳ್ಳಲು ಪರಿಸರ ಸಚಿವಾಲಯ, ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಮಹಾರಾಷ್ಟ್ರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ಎನ್ಜಿಟಿ ಇದೇ ಸಂದರ್ಭದಲ್ಲಿ ರಚಿಸಿತು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/freedom-fighter-hs-doreswamy-dies-833492.html" target="_blank">ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ನಿರ್ಮಾಣ ಯೋಜನೆಗಳಲ್ಲಿ ಪರಿಸರ ರಕ್ಷಣೆಗೆ ಸಂಬಂಧಿಸಿದಂತೆ ಮಾದರಿ ಕಾರ್ಯವಿಧಾನಗಳನ್ನು (ಎಸ್ಒಪಿ) ರೂಪಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್ಜಿಟಿ) ಎಲ್ಲ ರಾಜ್ಯಗಳಿಗೆ ಸೂಚಿಸಿದೆ.</p>.<p>ನಿರ್ಮಾಣ ಯೋಜನೆಗಳಲ್ಲಿ ನಿರಂತರವಾಗಿ ಪರಿಸರ ರಕ್ಷಣೆಯ ನಿಯಮಗಳನ್ನು ಉಲ್ಲಂಘಿಸುತ್ತಿರುವುದನ್ನು ಪರಿಗಣಿಸಿ ಎನ್ಜಿಟಿ ಈ ನಿರ್ದೇಶನ ನೀಡಿದೆ.</p>.<p>ಪುಣೆಯಲ್ಲಿ ‘ಗಂಗಾ ಅಲ್ಟಸ್’ ನಿರ್ಮಾಣ ಯೋಜನೆ ಕೈಗೊಳ್ಳಲು ಮಹಾರಾಷ್ಟ್ರದ ಪರಿಸರ ಪರಿಣಾಮ ಪರಿಶೀಲನಾ ಪ್ರಾಧಿಕಾರ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ಎನ್ಜಿಟಿ ಈ ನಿರ್ದೇಶನ ನೀಡಿದೆ.</p>.<p>‘ಮುಂಚಿತವಾಗಿಯೇ ಪರಿಸರ ಅನುಮೋದನೆ ಪಡೆಯದೆಯೇ ನಿರ್ಮಾಣ ಯೋಜನೆಗಳನ್ನು ಪೂರ್ಣಗೊಳಿಸುತ್ತಿರುವ ಪ್ರಕರಣಗಳು ನಡೆಯುತ್ತಿವೆ. ಹೀಗಾಗಿ, ಪರಿಸರ ಅನುಮೋದನೆ ನೀಡಲು ಸಮರ್ಪಕವಾದ ಮಾದರಿ ಕಾರ್ಯವಿಧಾನಗಳನ್ನು ರೂಪಿಸಬೇಕು. ಪರಿಸರ ಸಚಿವಾಲಯ ಸಹ ಈ ವಿಷಯವನ್ನು ಪರಿಗಣಿಸಿ ರಾಜ್ಯಗಳಿಗೆ ಪರಿಸರಕ್ಕೆ ಸಂಬಂಧಿಸಿದ ಪ್ರಾಧಿಕಾರಗಳಿಗೆ ಸುತ್ತೋಲೆಯನ್ನು ಕಳುಹಿಸಬೇಕು’ ಎಂದು ಎನ್ಜಿಟಿ ತಿಳಿಸಿದೆ.</p>.<p>‘ಗಂಗಾ ಅಲ್ಟಸ್’ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಪರಿಶೀಲನೆ ಕೈಗೊಳ್ಳಲು ಪರಿಸರ ಸಚಿವಾಲಯ, ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಮಹಾರಾಷ್ಟ್ರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ಎನ್ಜಿಟಿ ಇದೇ ಸಂದರ್ಭದಲ್ಲಿ ರಚಿಸಿತು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/freedom-fighter-hs-doreswamy-dies-833492.html" target="_blank">ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>