<p class="title"><strong>ನವದೆಹಲಿ: </strong>‘ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿಯ ಕಲ್ಲುಗಣಿಯಲ್ಲಿ ಸಂಭವಿಸಿದ್ದ ಸ್ಫೋಟ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ಮಾಲೀಕರು ಒಂದು ತಿಂಗಳೊಳಗೆ ಪರಿಹಾರ ನೀಡಲು ವಿಫಲರಾದಲ್ಲಿ, ರಾಜ್ಯ ಸರ್ಕಾರವೇ ಅದನ್ನು ಪಾವತಿಸಬೇಕು’ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸೂಚಿಸಿದೆ.</p>.<p class="title">ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯಲ್ ನೇತೃತ್ವದ ನ್ಯಾಯಮಂಡಳಿಯ ಪ್ರಧಾನ ಪೀಠವು, ‘ಜಿಲ್ಲಾ ಮ್ಯಾಜಿಸ್ಟ್ರೇಟ್ ಮೂಲಕ ಪರಿಹಾರವನ್ನು ಪಾವತಿಸಬೇಕು. ತದನಂತರ ಈ ಮೊತ್ತವನ್ನು ಜಿಲ್ಲಾಡಳಿತವು ಕಲ್ಲುಗಣಿಯ ಮಾಲೀಕರಿಂದ ವಸೂಲು ಮಾಡಲು ಕ್ರಮವಹಿಸಬೇಕು’ ಎಂದು ಆದೇಶಿಸಿತು.</p>.<p class="title">ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಈ ಆದೇಶಕ್ಕೆ ಬದ್ಧರಾಗಿ, ತಿಂಗಳೊಳಗೆ ಪರಿಹಾರವನ್ನು ವಿತರಿಸಲು ಕ್ರಮವಹಿಸಬೇಕು. ಮೃತರ ಕುಟುಂಬದ ಅರ್ಹರಿಗೆ ಈ ಪರಿಹಾರ ಮೊತ್ತವು ತಲುಪುವಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಅಗತ್ಯ ಕಾನೂನು ನೆರವು ಒದಗಿಸಬೇಕು ಎಂದೂ ತಿಳಿಸಿದೆ.</p>.<p class="title">ಪರಿಹಾರ ಪಾವತಿ ಕುರಿತಂತೆ ವಸ್ತುಸ್ಥಿತಿ ವರದಿಯನ್ನು ಮೂರು ತಿಂಗಳಲ್ಲಿ ಸಲ್ಲಿಸಬೇಕು ಎಂದು ಎನ್ಜಿಟಿಯು, ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದೆ.</p>.<p class="title">ಇದೇ ವರ್ಷದ ಫೆಬ್ರುವರಿ 22ರಂದು ಸಂಭವಿಸಿದ್ದ ಸ್ಫೋಟ ಪ್ರಕರಣದಲ್ಲಿ 5 ಮಂದಿ ಮೃತಪಟ್ಟಿದ್ದರು. ಸ್ವಪ್ರೇರಿತವಾಗಿ ವಿಚಾರಣೆ ಎತ್ತಿಕೊಂಡಿದ್ದ ನ್ಯಾಯಪೀಠ ವರದಿ ಸಲ್ಲಿಸಲು ಪರಿಣತರ ಸಮಿತಿ ರಚಿಸಿತ್ತು. ‘ಅವಘಡಕ್ಕೆ ಕಲ್ಲುಗಣಿ ಮಾಲೀಕರೇ ಹೊಣೆ. ಸ್ಫೋಟಕಗಳನ್ನು ಅವೈಜ್ಞಾನಿಕವಾಗಿ ನಿರ್ವಹಿಸಲಾಗುತ್ತಿತ್ತು’ ಎಂದು ವರದಿಯಲ್ಲಿ ತಿಳಿಸಿತ್ತು.</p>.<p class="title">ಮೃತರ ಕುಟುಂಬಕ್ಕೆ ಆರ್ಥಿಕ ಪರಿಹಾರವನ್ನು ಕಲ್ಲುಗಣಿಯ ಮಾಲೀಕರೇ ನೀಡಬೇಕು ಎಂದೂ ಸಮಿತಿ ಪ್ರತಿಪಾದಿಸಿತ್ತು. ವಾಸ್ತವಿಕ ಸ್ಥಿತಿಯನ್ನು ವರದಿ ಆಧಿಸಿದ್ದು, ಅಂಗೀಕರಿಸಲಾಗಿದೆ ಎಂದು ನ್ಯಾಯಪೀಠವು ತಿಳಿಸಿತ್ತು.<br /><br />‘ಕಾನೂನುಬಾಹಿರವಾಗಿ ಸ್ಪೋಟಕಗಳ ಸಂಗ್ರಹ ಮತ್ತು ಅವೈಜ್ಞಾನಿಕ ನಿರ್ವಹಣೆಯೇ ಅವಘಡಕ್ಕೆ ಕಾರಣ. ಲೋಪಕ್ಕೆ ಶಿರಡಿ ಸಾಯಿ ಅಗ್ರಿಗೇಟ್ಸ್, ಶ್ರೀ ಭ್ರಮರವಾಸಿನಿ ಎಂ. ಸ್ಯಾಂಡರ್ಸ್ ಎಲ್ಎಲ್ಪಿ ಹೊಣೆ’ ಎಂದು ವರದಿಯಲ್ಲಿ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>‘ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿಯ ಕಲ್ಲುಗಣಿಯಲ್ಲಿ ಸಂಭವಿಸಿದ್ದ ಸ್ಫೋಟ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ಮಾಲೀಕರು ಒಂದು ತಿಂಗಳೊಳಗೆ ಪರಿಹಾರ ನೀಡಲು ವಿಫಲರಾದಲ್ಲಿ, ರಾಜ್ಯ ಸರ್ಕಾರವೇ ಅದನ್ನು ಪಾವತಿಸಬೇಕು’ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸೂಚಿಸಿದೆ.</p>.<p class="title">ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯಲ್ ನೇತೃತ್ವದ ನ್ಯಾಯಮಂಡಳಿಯ ಪ್ರಧಾನ ಪೀಠವು, ‘ಜಿಲ್ಲಾ ಮ್ಯಾಜಿಸ್ಟ್ರೇಟ್ ಮೂಲಕ ಪರಿಹಾರವನ್ನು ಪಾವತಿಸಬೇಕು. ತದನಂತರ ಈ ಮೊತ್ತವನ್ನು ಜಿಲ್ಲಾಡಳಿತವು ಕಲ್ಲುಗಣಿಯ ಮಾಲೀಕರಿಂದ ವಸೂಲು ಮಾಡಲು ಕ್ರಮವಹಿಸಬೇಕು’ ಎಂದು ಆದೇಶಿಸಿತು.</p>.<p class="title">ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಈ ಆದೇಶಕ್ಕೆ ಬದ್ಧರಾಗಿ, ತಿಂಗಳೊಳಗೆ ಪರಿಹಾರವನ್ನು ವಿತರಿಸಲು ಕ್ರಮವಹಿಸಬೇಕು. ಮೃತರ ಕುಟುಂಬದ ಅರ್ಹರಿಗೆ ಈ ಪರಿಹಾರ ಮೊತ್ತವು ತಲುಪುವಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಅಗತ್ಯ ಕಾನೂನು ನೆರವು ಒದಗಿಸಬೇಕು ಎಂದೂ ತಿಳಿಸಿದೆ.</p>.<p class="title">ಪರಿಹಾರ ಪಾವತಿ ಕುರಿತಂತೆ ವಸ್ತುಸ್ಥಿತಿ ವರದಿಯನ್ನು ಮೂರು ತಿಂಗಳಲ್ಲಿ ಸಲ್ಲಿಸಬೇಕು ಎಂದು ಎನ್ಜಿಟಿಯು, ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದೆ.</p>.<p class="title">ಇದೇ ವರ್ಷದ ಫೆಬ್ರುವರಿ 22ರಂದು ಸಂಭವಿಸಿದ್ದ ಸ್ಫೋಟ ಪ್ರಕರಣದಲ್ಲಿ 5 ಮಂದಿ ಮೃತಪಟ್ಟಿದ್ದರು. ಸ್ವಪ್ರೇರಿತವಾಗಿ ವಿಚಾರಣೆ ಎತ್ತಿಕೊಂಡಿದ್ದ ನ್ಯಾಯಪೀಠ ವರದಿ ಸಲ್ಲಿಸಲು ಪರಿಣತರ ಸಮಿತಿ ರಚಿಸಿತ್ತು. ‘ಅವಘಡಕ್ಕೆ ಕಲ್ಲುಗಣಿ ಮಾಲೀಕರೇ ಹೊಣೆ. ಸ್ಫೋಟಕಗಳನ್ನು ಅವೈಜ್ಞಾನಿಕವಾಗಿ ನಿರ್ವಹಿಸಲಾಗುತ್ತಿತ್ತು’ ಎಂದು ವರದಿಯಲ್ಲಿ ತಿಳಿಸಿತ್ತು.</p>.<p class="title">ಮೃತರ ಕುಟುಂಬಕ್ಕೆ ಆರ್ಥಿಕ ಪರಿಹಾರವನ್ನು ಕಲ್ಲುಗಣಿಯ ಮಾಲೀಕರೇ ನೀಡಬೇಕು ಎಂದೂ ಸಮಿತಿ ಪ್ರತಿಪಾದಿಸಿತ್ತು. ವಾಸ್ತವಿಕ ಸ್ಥಿತಿಯನ್ನು ವರದಿ ಆಧಿಸಿದ್ದು, ಅಂಗೀಕರಿಸಲಾಗಿದೆ ಎಂದು ನ್ಯಾಯಪೀಠವು ತಿಳಿಸಿತ್ತು.<br /><br />‘ಕಾನೂನುಬಾಹಿರವಾಗಿ ಸ್ಪೋಟಕಗಳ ಸಂಗ್ರಹ ಮತ್ತು ಅವೈಜ್ಞಾನಿಕ ನಿರ್ವಹಣೆಯೇ ಅವಘಡಕ್ಕೆ ಕಾರಣ. ಲೋಪಕ್ಕೆ ಶಿರಡಿ ಸಾಯಿ ಅಗ್ರಿಗೇಟ್ಸ್, ಶ್ರೀ ಭ್ರಮರವಾಸಿನಿ ಎಂ. ಸ್ಯಾಂಡರ್ಸ್ ಎಲ್ಎಲ್ಪಿ ಹೊಣೆ’ ಎಂದು ವರದಿಯಲ್ಲಿ ತಿಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>