ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ವಲಯವು ತೀವ್ರ ಅಪಾಯದಲ್ಲಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಮಂಡಳಿಯು, ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಅಭಿವೃದ್ಧಿ ಚಟುವಟಿಕೆಗಳಿಗೆ ಅನುಮತಿ ನೀಡದಂತೆ ಘಟ್ಟದ ವ್ಯಾಪ್ತಿಯ ಕರ್ನಾಟಕ ಗುಜರಾತ್, ಮಹಾರಾಷ್ಟ್ರ, ಗೋವಾ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಮೇಲೆ ನಿರ್ಬಂಧ ವಿಧಿಸಿತ್ತು.