ನವದೆಹಲಿ: ದೆಹಲಿಯ ಆಸುಪಾಸಿನ ನಗರಗಳು (ಎನ್ಸಿಆರ್) ಸೇರಿದಂತೆ ದೇಶದ ಯಾವ ನಗರ ಮತ್ತು ಪಟ್ಟಣಗಳಲ್ಲಿ ಗಾಳಿಯ ಗುಣಮಟ್ಟ ಕಳಪೆಯಾಗಿದೆಯೋ, ಅಲ್ಲೆಲ್ಲ ಕೋವಿಡ್ 19 ಸಾಂಕ್ರಾಮಿಕದ ಸಮಯದಲ್ಲಿ ಎಲ್ಲ ವಿಧದ ಪಟಾಕಿ ಮಾರಾಟ ಮತ್ತು ಬಳಕೆಯ ಮೇಲೆ ನಿಷೇಧ ಹೇರುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.