ಅಂತರ್ಜಲದ ಗುಣಮಟ್ಟದ ಮೇಲೆ ಸಾಕಷ್ಟು ಪರಿಣಾಮ ಉಂಟು ಮಾಡುವ ಕೈಗಾರಿಕೆಗಳ ಸಂಸ್ಕರಿಸಿದ ತ್ಯಾಜ್ಯವನ್ನು ನೀರಾವರಿ ಉದ್ದೇಶಕ್ಕಾಗಿ ಹರಿಸಲು ಸಾಕಷ್ಟು ಭೂಮಿ ಹೊಂದಿರದ ಯಾವುದೇ ಕೈಗಾರಿಕೆಗೂ ಅನುಮತಿ ಇಲ್ಲ ಎಂದು ತಿಳಿಸಿದ್ದ ಪೀಠವು, ಈ ಅಂಶವನ್ನು ಗಮನದಲ್ಲಿ ಇರಿಸಿಕೊಂಡು, ನಿಗದಿತ ಮಾನದಂಡಗಳಿಗೆ ಅನುಗುಣವಾಗಿಯೇ ಮಾರ್ಗಸೂಚಿ ಹೊರಡಿಸುವಂತೆ ಸೂಚಿಸಿದೆ.