<p><strong>ನವದೆಹಲಿ: </strong>ತಮಿಳುನಾಡಿನ ಮದುರೈನಲ್ಲಿರುವ ಪುದುಕುಳಂ ಕನ್ಮೋಯಿ ಕೆರೆ ಬತ್ತಿ ಹೋಗಿದೆ ಎಂಬ ಕಾರಣಕ್ಕೆ ಆ ಜಾಗವನ್ನು ನಿವೇಶವನ್ನಾಗಿ ಪರಿವರ್ತಿಸಲು ಸಾಧ್ಯವಿಲ್ಲ. ಬದಲಿಗೆ ಆ ಕೆರೆಯನ್ನು ಪುನಶ್ಚೇತನಗೊಳಿಸುವಂತೆ ರಾಷ್ಟ್ರೀಯ ಹಸಿರು ಪೀಠ (ಎನ್ಜಿಟಿ) ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ಮದುರೈನಲ್ಲಿ ಬತ್ತಿ ಹೋಗಿರುವ ‘ಪುದುಕುಳಂ ಕನ್ಮೋಯಿ‘ ಕೆರೆಯ ಜಾಗವನ್ನು ವಸತಿ ನಿವೇಶನಗಳನ್ನಾಗಿ ಪರಿವರ್ತಿಸಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ವೇಳೆ ಎನ್ಜಿಟಿ ಈ ರೀತಿ ನಿರ್ದೇಶನ ನೀಡಿದೆ.</p>.<p>ಈ ಅರ್ಜಿಯ ವಿಚಾರಣೆ ವೇಳೆ, ‘ಜಲ ಮೂಲವೊಂದು ಬತ್ತಿ ಹೋಗಿದೆ ಎಂಬ ಕಾರಣಕ್ಕೆ, ಆ ಜಾಗವನ್ನು ವಸತಿ ನಿವೇಶಗಳನ್ನಾಗಿ ಪರಿವರ್ತಿಸಲು ಸಾಧ್ಯವಿಲ್ಲ‘ ಎಂದು ಅಭಿಪ್ರಾಯಪಟ್ಟಿದೆ. ಇದೇ ವೇಳೆ, ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಎನ್ಜಿಟಿ, ‘ನೈಸರ್ಗಿಕ ಸಂಪನ್ಮೂಲಗಳ ಪರಿಸರ ಮೌಲ್ಯವನ್ನು ರಕ್ಷಿಸುವ ಹೊಣೆ ರಾಜ್ಯ ಸರ್ಕಾರದ್ದು‘ ಎಂದು ಹೇಳಿದೆ.</p>.<p>ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಭೂ ವಿಲೇವಾರಿ ಘಟಕದವರು ಬತ್ತಿ ಹೋಗಿದ್ದ ಪುದುಕುಲಂ ಕನ್ಮೊಯಿ ಕೆರೆಯ ಜಾಗವನ್ನು ನಿವೇಶನವನ್ನಾಗಿ ಪರಿವರ್ತಿಸಿ, ಅದನ್ನು ಕೆಲವು ಪತ್ರಕರ್ತರಿಗೆ ಮಂಜೂರು ಮಾಡಲು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಎ.ಎಂ ವಿನೋದ್ ಅವರು ಎನ್ಜಿಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<p>ಅರ್ಜಿಯ ವಿಚಾರಣೆ ನಡೆಸಿದ ಎನ್ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ನೇತೃತ್ವದ ಪೀಠ, ‘ಪರಿಸರ ರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸುವ, ಮೈಕ್ರೋ ಕ್ಲೈಮೆಟ್, ಅಂತರ್ಜಲ ಮರುಪೂರಣಗೊಳಿಸುವ ಹಾಗೂ ಕುಡಿಯುವ ನೀರು ಪೂರೈಸುವಲ್ಲಿ ಜಲಮೂಲಗಳು ಪ್ರಮುಖ ಪಾತ್ರವಹಿಸುತ್ತವೆ‘ ಎಂದು ಹೇಳಿದ್ದಾರೆ.</p>.<p>‘ಈ ಪ್ರಕರಣದಲ್ಲಿ ಜಲಮೂಲ ಒಣಗಿಹೋಗಿದೆ ಎಂಬ ಕಾರಣಕ್ಕೆ, ಅದನ್ನು ವಸತಿ ಪ್ರದೇಶವನ್ನಾಗಿ ಪರಿವರ್ತಿಸಬಹುದೇ ಎಂಬ ಪ್ರಶ್ನೆ ಉದ್ಭವಿಸಿದೆ. ಆದರೆ, ನಮ್ಮ ಅಭಿಪ್ರಾಯದಲ್ಲಿ ಉತ್ತರ ನಕಾರಾತ್ಮಕವಾಗಿರುತ್ತದೆ‘ ಎಂದು ನ್ಯಾಯಮೂರ್ತಿ ಗಳಾದ ಸುಧೀರ್ ಅಗರ್ವಾಲ್ ಮತ್ತು ಬ್ರಿಜೇಶ್ ಸೇಥಿ ಅವರನ್ನೊಳಗೊಂಡ ಪೀಠ ಹೇಳಿತು.</p>.<p>‘ಪತ್ರಕರ್ತರಿಗೆ ವಸತಿ ನಿವೇಶನ ಹಂಚುವ ಅಗತ್ಯ ಹಾಗೂ ಕೆರೆ ಬತ್ತಿ ಹೋಗಿದೆ ಎಂಬ ಎರಡು ಕಾರಣಗಳನ್ನು ಹೊರತು ಪಡಿಸಿ, ಜಲಮೂಲವನ್ನು ಮುಚ್ಚಲು ಇನ್ನಾವುದೇ ಬಲವಾದ ಸಾಮಾಜಿಕ ಅಗತ್ಯವನ್ನು ಇಲ್ಲಿ ಉಲ್ಲೇಖಿಸಿಲ್ಲ‘ ಎಂದು ಅರ್ಜಿ ವಿಚಾರಣೆ ವೇಳೆ ನ್ಯಾಯಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ತಮಿಳುನಾಡಿನ ಮದುರೈನಲ್ಲಿರುವ ಪುದುಕುಳಂ ಕನ್ಮೋಯಿ ಕೆರೆ ಬತ್ತಿ ಹೋಗಿದೆ ಎಂಬ ಕಾರಣಕ್ಕೆ ಆ ಜಾಗವನ್ನು ನಿವೇಶವನ್ನಾಗಿ ಪರಿವರ್ತಿಸಲು ಸಾಧ್ಯವಿಲ್ಲ. ಬದಲಿಗೆ ಆ ಕೆರೆಯನ್ನು ಪುನಶ್ಚೇತನಗೊಳಿಸುವಂತೆ ರಾಷ್ಟ್ರೀಯ ಹಸಿರು ಪೀಠ (ಎನ್ಜಿಟಿ) ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.</p>.<p>ಮದುರೈನಲ್ಲಿ ಬತ್ತಿ ಹೋಗಿರುವ ‘ಪುದುಕುಳಂ ಕನ್ಮೋಯಿ‘ ಕೆರೆಯ ಜಾಗವನ್ನು ವಸತಿ ನಿವೇಶನಗಳನ್ನಾಗಿ ಪರಿವರ್ತಿಸಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ವೇಳೆ ಎನ್ಜಿಟಿ ಈ ರೀತಿ ನಿರ್ದೇಶನ ನೀಡಿದೆ.</p>.<p>ಈ ಅರ್ಜಿಯ ವಿಚಾರಣೆ ವೇಳೆ, ‘ಜಲ ಮೂಲವೊಂದು ಬತ್ತಿ ಹೋಗಿದೆ ಎಂಬ ಕಾರಣಕ್ಕೆ, ಆ ಜಾಗವನ್ನು ವಸತಿ ನಿವೇಶಗಳನ್ನಾಗಿ ಪರಿವರ್ತಿಸಲು ಸಾಧ್ಯವಿಲ್ಲ‘ ಎಂದು ಅಭಿಪ್ರಾಯಪಟ್ಟಿದೆ. ಇದೇ ವೇಳೆ, ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಎನ್ಜಿಟಿ, ‘ನೈಸರ್ಗಿಕ ಸಂಪನ್ಮೂಲಗಳ ಪರಿಸರ ಮೌಲ್ಯವನ್ನು ರಕ್ಷಿಸುವ ಹೊಣೆ ರಾಜ್ಯ ಸರ್ಕಾರದ್ದು‘ ಎಂದು ಹೇಳಿದೆ.</p>.<p>ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಭೂ ವಿಲೇವಾರಿ ಘಟಕದವರು ಬತ್ತಿ ಹೋಗಿದ್ದ ಪುದುಕುಲಂ ಕನ್ಮೊಯಿ ಕೆರೆಯ ಜಾಗವನ್ನು ನಿವೇಶನವನ್ನಾಗಿ ಪರಿವರ್ತಿಸಿ, ಅದನ್ನು ಕೆಲವು ಪತ್ರಕರ್ತರಿಗೆ ಮಂಜೂರು ಮಾಡಲು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಎ.ಎಂ ವಿನೋದ್ ಅವರು ಎನ್ಜಿಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.</p>.<p>ಅರ್ಜಿಯ ವಿಚಾರಣೆ ನಡೆಸಿದ ಎನ್ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ನೇತೃತ್ವದ ಪೀಠ, ‘ಪರಿಸರ ರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸುವ, ಮೈಕ್ರೋ ಕ್ಲೈಮೆಟ್, ಅಂತರ್ಜಲ ಮರುಪೂರಣಗೊಳಿಸುವ ಹಾಗೂ ಕುಡಿಯುವ ನೀರು ಪೂರೈಸುವಲ್ಲಿ ಜಲಮೂಲಗಳು ಪ್ರಮುಖ ಪಾತ್ರವಹಿಸುತ್ತವೆ‘ ಎಂದು ಹೇಳಿದ್ದಾರೆ.</p>.<p>‘ಈ ಪ್ರಕರಣದಲ್ಲಿ ಜಲಮೂಲ ಒಣಗಿಹೋಗಿದೆ ಎಂಬ ಕಾರಣಕ್ಕೆ, ಅದನ್ನು ವಸತಿ ಪ್ರದೇಶವನ್ನಾಗಿ ಪರಿವರ್ತಿಸಬಹುದೇ ಎಂಬ ಪ್ರಶ್ನೆ ಉದ್ಭವಿಸಿದೆ. ಆದರೆ, ನಮ್ಮ ಅಭಿಪ್ರಾಯದಲ್ಲಿ ಉತ್ತರ ನಕಾರಾತ್ಮಕವಾಗಿರುತ್ತದೆ‘ ಎಂದು ನ್ಯಾಯಮೂರ್ತಿ ಗಳಾದ ಸುಧೀರ್ ಅಗರ್ವಾಲ್ ಮತ್ತು ಬ್ರಿಜೇಶ್ ಸೇಥಿ ಅವರನ್ನೊಳಗೊಂಡ ಪೀಠ ಹೇಳಿತು.</p>.<p>‘ಪತ್ರಕರ್ತರಿಗೆ ವಸತಿ ನಿವೇಶನ ಹಂಚುವ ಅಗತ್ಯ ಹಾಗೂ ಕೆರೆ ಬತ್ತಿ ಹೋಗಿದೆ ಎಂಬ ಎರಡು ಕಾರಣಗಳನ್ನು ಹೊರತು ಪಡಿಸಿ, ಜಲಮೂಲವನ್ನು ಮುಚ್ಚಲು ಇನ್ನಾವುದೇ ಬಲವಾದ ಸಾಮಾಜಿಕ ಅಗತ್ಯವನ್ನು ಇಲ್ಲಿ ಉಲ್ಲೇಖಿಸಿಲ್ಲ‘ ಎಂದು ಅರ್ಜಿ ವಿಚಾರಣೆ ವೇಳೆ ನ್ಯಾಯಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>