<p class="title"><strong>ನವದೆಹಲಿ: </strong>ಮಹಾರಾಷ್ಟ್ರದ ರಾಯಘಡ್ ಜಿಲ್ಲೆಯ ಕೆಲವು ಹಳ್ಳಿಗಳಲ್ಲಿ ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್ಡಬ್ಲ್ಯೂ) ಕಂಪನಿಯು ಕೈಗಾರಿಕಾ ಚಟುವಟಿಕೆಗಳನ್ನು ನಡೆಸಲು ಪರಿಸರದ ಮಾನದಂಡಗಳನ್ನು ಉಲ್ಲಂಘಿಸಿದೆ ಎಂದು ಸಲ್ಲಿಕೆಯಾದ ಅರ್ಜಿಯ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಐವರು ಸದಸ್ಯರ ಸಮಿತಿಯನ್ನು ರಚಿಸಿದೆ.</p>.<p class="bodytext">ಸ್ಥಳದಲ್ಲಿ ಜಲ ಮತ್ತು ವಾಯು ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳು ಮತ್ತು ಅಪಾಯಕಾರಿ ತ್ಯಾಜ್ಯ ನಿರ್ವಹಣೆ ಸಂಬಂಧಿಸಿದಂತೆ ನಿಯಮಗಳನ್ನು ಪಾಲಿಸಲಾಗಿದೆಯೇ ಹಾಗೂ ಕೃಷಿಗೆ ಹಾನಿ ಇತ್ಯಾದಿ ವಿಷಯಗಳ ಬಗ್ಗೆ ಪರಿಶೀಲಿಸುವಂತೆ ನ್ಯಾಯಮೂರ್ತಿ ಎ.ಕೆ.ಗೋಯಲ್ ಅವರನ್ನೊಳಗೊಂಡ ಪೀಠವು ಸಮಿತಿಗೆ ಸೂಚಿಸಿದೆ.</p>.<p class="bodytext">ಪರಿಸರ ಮತ್ತು ಅರಣ್ಯ ಸಚಿವಾಲಯದ ಜಂಟಿ ನಿರ್ದೇಶಕರ ಹುದ್ದೆಯ ಸಮಾನ ಅಧಿಕಾರಿಯು ಸಮಿತಿಯ ಮುಖ್ಯಸ್ಥರಾಗುತ್ತಾರೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಮುಂಬೈನ ಐಐಟಿ, ರಾಯಘಡದ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರು ಸಮಿತಿಯ ಇತರ ಸದಸ್ಯರಾಗಿರುತ್ತಾರೆ.</p>.<p class="bodytext">’ಸ್ಥಳದಲ್ಲಿ ಕೈಗಾರಿಕಾ ಚಟುವಟಿಕೆಗಳಿಂದ ಹಾನಿಗೊಳಗಾದ ಪರಿಸರ ಮತ್ತು ಪರಿಹಾರ ನೀಡುವ ಬಗ್ಗೆ ಸಮಿತಿಯು ಅಂದಾಜಿಸಲಿದೆ. ಅಗತ್ಯವಿದ್ದರೆ ತಜ್ಞ ಸಂಸ್ಥೆ ಅಥವಾ ವ್ಯಕ್ತಿಯ ಮೂಲಕ ಸ್ಥಳ ಪರಿಶೀಲನೆ ನಡೆಸಲು ಸಮಿತಿಗೆ ಸ್ವಾತಂತ್ರ್ಯವಿದೆ‘ ಎಂದು ಪೀಠ ಹೇಳಿದೆ.</p>.<p class="bodytext">’ಸ್ಥಳದಲ್ಲಿ ಒಂದು ವೇಳೆ ಪರಿಸರ ನಾಶವಾಗಿರುವುದು ಕಂಡು ಬಂದರೆ ಪರಿಹಾರ ಮೊತ್ತವನ್ನು ನೀಡಲು ಕಂಪನಿಗೆ ಸಲಹೆ ನೀಡಬಹುದು. ಈ ಕುರಿತು ನಾಲ್ಕು ತಿಂಗಳೊಳಗೆ ಇ–ಮೇಲ್ ಮೂಲಕ ವರದಿ ಸಲ್ಲಿಸಬೇಕು‘ ಎಂದು ಪೀಠ ನಿರ್ದೇಶನ ನೀಡಿತು.</p>.<p class="bodytext">ಜಿಂದಾಲ್ ಸ್ಟೀಲ್ ವರ್ಕ್ಸ್ ಪರಿಸರ ನಿಯಮಗಳನ್ನು ಉಲ್ಲಂಘಿಸಿದೆ ಎಂದು ರಾಯಘಡದ ಸಮಿತಾ ರಾಜೇಂದ್ರ ಪಾಟೀಲ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಎನ್ಜಿಟಿ, ಈ ನಿರ್ದೇಶನಗಳನ್ನು ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಮಹಾರಾಷ್ಟ್ರದ ರಾಯಘಡ್ ಜಿಲ್ಲೆಯ ಕೆಲವು ಹಳ್ಳಿಗಳಲ್ಲಿ ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್ಡಬ್ಲ್ಯೂ) ಕಂಪನಿಯು ಕೈಗಾರಿಕಾ ಚಟುವಟಿಕೆಗಳನ್ನು ನಡೆಸಲು ಪರಿಸರದ ಮಾನದಂಡಗಳನ್ನು ಉಲ್ಲಂಘಿಸಿದೆ ಎಂದು ಸಲ್ಲಿಕೆಯಾದ ಅರ್ಜಿಯ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಐವರು ಸದಸ್ಯರ ಸಮಿತಿಯನ್ನು ರಚಿಸಿದೆ.</p>.<p class="bodytext">ಸ್ಥಳದಲ್ಲಿ ಜಲ ಮತ್ತು ವಾಯು ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳು ಮತ್ತು ಅಪಾಯಕಾರಿ ತ್ಯಾಜ್ಯ ನಿರ್ವಹಣೆ ಸಂಬಂಧಿಸಿದಂತೆ ನಿಯಮಗಳನ್ನು ಪಾಲಿಸಲಾಗಿದೆಯೇ ಹಾಗೂ ಕೃಷಿಗೆ ಹಾನಿ ಇತ್ಯಾದಿ ವಿಷಯಗಳ ಬಗ್ಗೆ ಪರಿಶೀಲಿಸುವಂತೆ ನ್ಯಾಯಮೂರ್ತಿ ಎ.ಕೆ.ಗೋಯಲ್ ಅವರನ್ನೊಳಗೊಂಡ ಪೀಠವು ಸಮಿತಿಗೆ ಸೂಚಿಸಿದೆ.</p>.<p class="bodytext">ಪರಿಸರ ಮತ್ತು ಅರಣ್ಯ ಸಚಿವಾಲಯದ ಜಂಟಿ ನಿರ್ದೇಶಕರ ಹುದ್ದೆಯ ಸಮಾನ ಅಧಿಕಾರಿಯು ಸಮಿತಿಯ ಮುಖ್ಯಸ್ಥರಾಗುತ್ತಾರೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಮುಂಬೈನ ಐಐಟಿ, ರಾಯಘಡದ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರು ಸಮಿತಿಯ ಇತರ ಸದಸ್ಯರಾಗಿರುತ್ತಾರೆ.</p>.<p class="bodytext">’ಸ್ಥಳದಲ್ಲಿ ಕೈಗಾರಿಕಾ ಚಟುವಟಿಕೆಗಳಿಂದ ಹಾನಿಗೊಳಗಾದ ಪರಿಸರ ಮತ್ತು ಪರಿಹಾರ ನೀಡುವ ಬಗ್ಗೆ ಸಮಿತಿಯು ಅಂದಾಜಿಸಲಿದೆ. ಅಗತ್ಯವಿದ್ದರೆ ತಜ್ಞ ಸಂಸ್ಥೆ ಅಥವಾ ವ್ಯಕ್ತಿಯ ಮೂಲಕ ಸ್ಥಳ ಪರಿಶೀಲನೆ ನಡೆಸಲು ಸಮಿತಿಗೆ ಸ್ವಾತಂತ್ರ್ಯವಿದೆ‘ ಎಂದು ಪೀಠ ಹೇಳಿದೆ.</p>.<p class="bodytext">’ಸ್ಥಳದಲ್ಲಿ ಒಂದು ವೇಳೆ ಪರಿಸರ ನಾಶವಾಗಿರುವುದು ಕಂಡು ಬಂದರೆ ಪರಿಹಾರ ಮೊತ್ತವನ್ನು ನೀಡಲು ಕಂಪನಿಗೆ ಸಲಹೆ ನೀಡಬಹುದು. ಈ ಕುರಿತು ನಾಲ್ಕು ತಿಂಗಳೊಳಗೆ ಇ–ಮೇಲ್ ಮೂಲಕ ವರದಿ ಸಲ್ಲಿಸಬೇಕು‘ ಎಂದು ಪೀಠ ನಿರ್ದೇಶನ ನೀಡಿತು.</p>.<p class="bodytext">ಜಿಂದಾಲ್ ಸ್ಟೀಲ್ ವರ್ಕ್ಸ್ ಪರಿಸರ ನಿಯಮಗಳನ್ನು ಉಲ್ಲಂಘಿಸಿದೆ ಎಂದು ರಾಯಘಡದ ಸಮಿತಾ ರಾಜೇಂದ್ರ ಪಾಟೀಲ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಎನ್ಜಿಟಿ, ಈ ನಿರ್ದೇಶನಗಳನ್ನು ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>