<p><strong>ನವದೆಹಲಿ:</strong> ದೇಶದಲ್ಲಿ ವಾಯು ಮಾಲಿನ್ಯ ತಡೆಯುವುದು ಹಾಗೂ ವಾಯುವಿನ ಗುಣಮಟ್ಟವನ್ನು ಸುಧಾರಿಸುವ ಸಂಬಂಧ ಕೈಗೊಳ್ಳುವ ಕ್ರಮಗಳ ಮೇಲ್ವಿಚಾರಣೆಗಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ರಾಷ್ಟ್ರೀಯ ಕಾರ್ಯಪಡೆಯನ್ನು (ಎನ್ಟಿಎಫ್) ರಚಿಸಿದೆ.</p>.<p>ಈ ಕಾರ್ಯಪಡೆಯು 8 ಜನ ಸದಸ್ಯರನ್ನು ಒಳಗೊಂಡಿರಲಿದೆ. ವಾಯುವಿನ ಗುಣಮಟ್ಟವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರದ ಎಲ್ಲ ಹಂತಗಳಲ್ಲಿಯೂ ಸಮನ್ವಯ ಹಾಗೂ ಸಮಗ್ರವಾದ ಪ್ರಯತ್ನದ ಅಗತ್ಯವಿದೆ ಎಂದು ಎನ್ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಎ.ಕೆ.ಗೋಯಲ್ ನೇತೃತ್ವದ ಪೀಠ ಹೇಳಿದೆ.</p>.<p>ದೇಶದಲ್ಲಿ ಪ್ರತಿ ವರ್ಷ 15 ಲಕ್ಷಕ್ಕೂ ಅಧಿಕ ಜನರು ವಾಯುಮಾಲಿನ್ಯದಿಂದಾಗಿ ಸಾವನ್ನಪ್ಪುತ್ತಾರೆ ಎಂದು ಸಮೀಕ್ಷೆಯೊಂದು ಹೇಳುತ್ತದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಎನ್ಜಿಟಿ ಈ ಕ್ರಮ ಕೈಗೊಂಡಿದೆ.</p>.<p>ಪರಿಸರ, ಅರಣ್ಯ ಸಚಿವಾಲಯದ ಕಾರ್ಯದರ್ಶಿ ಈ ಕಾರ್ಯಪಡೆಯ ನೇತೃತ್ವ ವಹಿಸುವರು. ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ, ರಸ್ತೆ ಸಾರಿಗೆ, ಪೆಟ್ರೋಲಿಯಂ, ಇಂಧನ, ಕೃಷಿ, ಆರೋಗ್ಯ ಸಚಿವಾಲಯಗಳ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡಲಾಗುತ್ತದೆ. ಈ ಅಧಿಕಾರಿಗಳು ಜಂಟಿ ಕಾರ್ಯದರ್ಶಿಗೆ ಸಮನಾದ ಹುದ್ದೆಗಿಂತ ಕಡಿಮೆ ದರ್ಜೆಯ ಅಧಿಕಾರಿಗಳಾಗಿರಬಾರದು. ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಸಹ ಈ ಕಾರ್ಯಪಡೆಯ ಸದಸ್ಯರಾಗಿರುತ್ತಾರೆ.</p>.<p>ಪ್ರತಿ ಹಂತದಲ್ಲಿಯೂ ಉತ್ತರದಾಯಿತ್ವ ನಿಗದಿ ಮಾಡುವುದು. ವಾಯು ಮಾಲಿನ ತಡೆಗಟ್ಟಲು ರೂಪಿಸಿರುವ ನಿಯಮ, ಕಾಲಕಾಲಕ್ಕೆ ಹೊರಡಿಸುವ ಆದೇಶಗಳ ಉಲ್ಲಂಘನೆ ಕಂಡು ಬಂದಾಗ ಪರಿಹಾರಧನವನ್ನು ವಸೂಲಿ ಮಾಡಬೇಕು ಎಂದು ಪೀಠ ಹೇಳಿದೆ.</p>.<p>‘ಕಾರ್ಯಪಡೆಯು ಒಂದು ತಿಂಗಳ ಒಳಗಾಗಿ ಮೊದಲ ಸಭೆಯನ್ನು ಆಯೋಜಿಸಬೇಕು. ನಂತರ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ರಚಿಸಲಾಗಿರುವ ಸಮಿತಿಗಳ ಕಾರ್ಯವನ್ನು ಪರಿಶೀಲಿಸಲು ಸಭೆಗಳನ್ನು ನಡೆಸಬೇಕು’ ಎಂದೂ ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ವಾಯು ಮಾಲಿನ್ಯ ತಡೆಯುವುದು ಹಾಗೂ ವಾಯುವಿನ ಗುಣಮಟ್ಟವನ್ನು ಸುಧಾರಿಸುವ ಸಂಬಂಧ ಕೈಗೊಳ್ಳುವ ಕ್ರಮಗಳ ಮೇಲ್ವಿಚಾರಣೆಗಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ರಾಷ್ಟ್ರೀಯ ಕಾರ್ಯಪಡೆಯನ್ನು (ಎನ್ಟಿಎಫ್) ರಚಿಸಿದೆ.</p>.<p>ಈ ಕಾರ್ಯಪಡೆಯು 8 ಜನ ಸದಸ್ಯರನ್ನು ಒಳಗೊಂಡಿರಲಿದೆ. ವಾಯುವಿನ ಗುಣಮಟ್ಟವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರದ ಎಲ್ಲ ಹಂತಗಳಲ್ಲಿಯೂ ಸಮನ್ವಯ ಹಾಗೂ ಸಮಗ್ರವಾದ ಪ್ರಯತ್ನದ ಅಗತ್ಯವಿದೆ ಎಂದು ಎನ್ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಎ.ಕೆ.ಗೋಯಲ್ ನೇತೃತ್ವದ ಪೀಠ ಹೇಳಿದೆ.</p>.<p>ದೇಶದಲ್ಲಿ ಪ್ರತಿ ವರ್ಷ 15 ಲಕ್ಷಕ್ಕೂ ಅಧಿಕ ಜನರು ವಾಯುಮಾಲಿನ್ಯದಿಂದಾಗಿ ಸಾವನ್ನಪ್ಪುತ್ತಾರೆ ಎಂದು ಸಮೀಕ್ಷೆಯೊಂದು ಹೇಳುತ್ತದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಎನ್ಜಿಟಿ ಈ ಕ್ರಮ ಕೈಗೊಂಡಿದೆ.</p>.<p>ಪರಿಸರ, ಅರಣ್ಯ ಸಚಿವಾಲಯದ ಕಾರ್ಯದರ್ಶಿ ಈ ಕಾರ್ಯಪಡೆಯ ನೇತೃತ್ವ ವಹಿಸುವರು. ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ, ರಸ್ತೆ ಸಾರಿಗೆ, ಪೆಟ್ರೋಲಿಯಂ, ಇಂಧನ, ಕೃಷಿ, ಆರೋಗ್ಯ ಸಚಿವಾಲಯಗಳ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡಲಾಗುತ್ತದೆ. ಈ ಅಧಿಕಾರಿಗಳು ಜಂಟಿ ಕಾರ್ಯದರ್ಶಿಗೆ ಸಮನಾದ ಹುದ್ದೆಗಿಂತ ಕಡಿಮೆ ದರ್ಜೆಯ ಅಧಿಕಾರಿಗಳಾಗಿರಬಾರದು. ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಸಹ ಈ ಕಾರ್ಯಪಡೆಯ ಸದಸ್ಯರಾಗಿರುತ್ತಾರೆ.</p>.<p>ಪ್ರತಿ ಹಂತದಲ್ಲಿಯೂ ಉತ್ತರದಾಯಿತ್ವ ನಿಗದಿ ಮಾಡುವುದು. ವಾಯು ಮಾಲಿನ ತಡೆಗಟ್ಟಲು ರೂಪಿಸಿರುವ ನಿಯಮ, ಕಾಲಕಾಲಕ್ಕೆ ಹೊರಡಿಸುವ ಆದೇಶಗಳ ಉಲ್ಲಂಘನೆ ಕಂಡು ಬಂದಾಗ ಪರಿಹಾರಧನವನ್ನು ವಸೂಲಿ ಮಾಡಬೇಕು ಎಂದು ಪೀಠ ಹೇಳಿದೆ.</p>.<p>‘ಕಾರ್ಯಪಡೆಯು ಒಂದು ತಿಂಗಳ ಒಳಗಾಗಿ ಮೊದಲ ಸಭೆಯನ್ನು ಆಯೋಜಿಸಬೇಕು. ನಂತರ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ರಚಿಸಲಾಗಿರುವ ಸಮಿತಿಗಳ ಕಾರ್ಯವನ್ನು ಪರಿಶೀಲಿಸಲು ಸಭೆಗಳನ್ನು ನಡೆಸಬೇಕು’ ಎಂದೂ ಪೀಠ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>