ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯಲ್ ಅವರ ನೇತೃತ್ವದ ಎನ್ಜಿಟಿಯ ಪ್ರಧಾನ ಪೀಠವು,ಸಾಂವಿಧಾನಿಕ ಕರ್ತವ್ಯಗಳನ್ನು ನಿರ್ವಹಿಸಲು ವಿಫಲವಾಗಿರುವುದಕ್ಕೆ ಮತ್ತು ಮಾಲಿನ್ಯಕ್ಕೆ ಕಾರಣವಾಗಿರುವುದಕ್ಕೆ ರಾಜ್ಯ ಸರ್ಕಾರವನ್ನು ಹೊಣೆಯಾಗಿಸಿ, ದಂಡದ ಮೊತ್ತವನ್ನುಎರಡು ತಿಂಗಳೊಳಗೆ ಪ್ರತ್ಯೇಕ ಖಾತೆಯಲ್ಲಿ ಠೇವಣಿ ಇರಿಸುವಂತೆ, ಈ ಹಣವನ್ನು ಪರಿಸರ ಪುನಶ್ಚೇತನಕ್ಕೆ ಬಳಸಿಕೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದೆ.