ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಠೇವಣಿ ಇರಿಸಲು ಆದೇಶಿಸುವ ಅಧಿಕಾರ ಎನ್.ಜಿ.ಟಿಗಿಲ್ಲ: ಸುಪ್ರೀಂ ಕೋರ್ಟ್

Last Updated 29 ಆಗಸ್ಟ್ 2020, 19:08 IST
ಅಕ್ಷರ ಗಾತ್ರ

ನವದೆಹಲಿ: ತನ್ನ ಆದೇಶದ ಜಾರಿಗೆ ಖಾತರಿಯಾಗಿ ದೊಡ್ಡ ಮೊತ್ತವನ್ನು ಠೇವಣಿಯಾಗಿ ಇರಿಸುವಂತೆ ರಾಜ್ಯಗಳಿಗೆ ಸೂಚಿಸುವ ಅಧಿಕಾರ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್.ಜಿ.ಟಿ) ಇಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಇಂದಿರಾ ಬ್ಯಾನರ್ಜಿ ಅವರಿದ್ದ ನ್ಯಾಯಪೀಠವು, ರಾಜ್ಯ ಸರ್ಕಾರಿ ಇಲಾಖೆಗಳ ಪ್ರಮಾದಗಳಿಗೆ ಅನ್ವಯಿಸುವ ಪರಿಸರ ಸಂರಕ್ಷಣಾ ಕಾಯ್ದೆ, ಆದೇಶ ಮತ್ತು ನಿಯಮಗಳಲ್ಲಿ ಖಾತರಿಯಾಗಿ ಹಣ ಠೇವಣಿ ಇರಿಸಲು ಸೂಚಿಸುವ ಅವಕಾಶ ಕಲ್ಪಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿತು.

ಎನ್.ಜಿ.ಟಿ ಕಾಯ್ದೆಯಲ್ಲಿ ಇದಕ್ಕೆ ಅವಕಾಶವಿಲ್ಲ. ಆದರೆ, ದಂಡ ವಿಧಿಸಲು ಅವಕಾಶವಿದೆ ಎಂಬುದನ್ನು ಪೀಠವು ಪ್ರಮುಖವಾಗಿ ಉಲ್ಲೇಖಿಸಿದೆ. 25 ಕೋಟಿ ಠೇವಣಿ ಇಡಬೇಕು ಎಂದು ಮಧ್ಯಪ್ರದೇಶ ಸರ್ಕಾರಕ್ಕೆ 2015ರ ಏಪ್ರಿಲ್ ತಿಂಗಳು ಎನ್.ಜಿ.ಟಿ ನೀಡಿದ್ದ ಆದೇಶಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ, ಈ ತೀರ್ಪು ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT