ಎನ್ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಎ.ಕೆ. ಗೋಯಲ್ ನೇತೃತ್ವದ ಪೀಠವು, ‘ಮಾಲಿನ್ಯವನ್ನು ನಿಯಂತ್ರಿಸಲು ಸಮಗ್ರ ಯೋಜನೆಯನ್ನು ರೂಪಿಸುವುದುರಾಜ್ಯದ ಜವಾಬ್ದಾರಿ. ಆದರೆ ಪಂಜಾಬ್ ಇದನ್ನು ಅರ್ಥಮಾಡಿಕೊಂಡಿಲ್ಲ. ಆಯವ್ಯಯ ಹಂಚಿಕೆಯಲ್ಲಿ ಕೊರತೆಯಿದ್ದರೆ, ವೆಚ್ಚವನ್ನು ಕಡಿಮೆ ಮಾಡುವ ಅಥವಾ ಸಂಪನ್ಮೂಲಗಳನ್ನು ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರವು ಸೂಕ್ತ ಯೋಜನೆ ಹೊಂದಬಹುದು’ ಎಂದು ಹೇಳಿದೆ.