‘ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಹಾಗೂ ಉತ್ತರಪ್ರದೇಶ ಮಾಲಿನ್ಯ ನಿಯಂತ್ರಣ ಮಂಡಳಿಗಳು (ಯುಪಿಪಿಸಿಬಿ) ಸಲ್ಲಿಸಿರುವ ವಿವಿಧ ತಪಾಸಣಾ ವರದಿಗಳನ್ನು ಪರಿಶೀಲಿಸಲಾಗಿದ್ದು, ಇದರಲ್ಲಿ ಗಣನೀಯ ಪ್ರಮಾಣದಲ್ಲಿ ನಿರಂತರವಾಗಿ ಪರಿಸರ ನಿಯಮಗಳನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ’ ಎಂದು ಎನ್ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ಅವರ ನೇತೃತ್ವದ ಪೀಠವು ತಿಳಿಸಿದೆ.