ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ ಸರ್ಕಾರಕ್ಕೆ ₹3,500 ಕೋಟಿ ದಂಡ ವಿಧಿಸಿದ ಎನ್‌ಜಿಟಿ

Last Updated 3 ಸೆಪ್ಟೆಂಬರ್ 2022, 15:32 IST
ಅಕ್ಷರ ಗಾತ್ರ

ನವದೆಹಲಿ: ಒಣ ತ್ಯಾಜ್ಯ ಮತ್ತು ಹಸಿ ತ್ಯಾಜ್ಯ ನಿರ್ವಹಣೆ ಮತ್ತು ಸಂಸ್ಕರಣೆಯಲ್ಲಿ ದೊಡ್ಡ ಅಂತರವಿದೆ ಎಂಬ ಕಾರಣಕ್ಕೆ ರಾಷ್ಟ್ರೀಯ ಹಸಿರು ನ್ಯಾಯಪೀಠವು (ಎನ್‌ಜಿಟಿ) ಪಶ್ಚಿಮ ಬಂಗಾಳ ಸರ್ಕಾರಕ್ಕೆ ₹3,500 ಕೋಟಿ ದಂಡ ವಿಧಿಸಿದೆ.

2022–23ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ನಗರಾಭಿವೃದ್ಧಿ ಮತ್ತು ಪುರಸಭೆ ವ್ಯವಹಾರಗಳಿಗಾಗಿ ₹12,818.99 ಕೋಟಿ ಅನುದಾನ ನೀಡಲಾಗಿತ್ತು. ಆದರೂ, ಕೊಳಚೆ ಮತ್ತು ಒಣ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ಒದಗಿಸುವ ಯೋಜನೆಗೆ ರಾಜ್ಯ ಸರ್ಕಾರ ಮಹತ್ವ ನೀಡಿಲ್ಲ ಎಂದು ತಿಳಿದುಬಂದಿದೆ ಎಂದು ಎನ್‌ಜಿಟಿ ಹೇಳಿದೆ.

ನಗರ ಪ್ರದೇಶಗಳಲ್ಲಿ ಪ್ರತಿದಿನ 275.8 ಕೋಟಿ ಲೀಟರ್‌ ಕೊಳಚೆ ಉತ್ಪಾದನೆ ಆಗುತ್ತಿದೆ. ಸದ್ಯ ಪ್ರತಿದಿನ 150.5 ಕೋಟಿ ಲೀಟರ್‌ ಕೊಳಚೆ ಸಂಸ್ಕರಣೆ ಮಾಡಲು ವ್ಯವಸ್ಥೆಯಿದೆ. ಆದರೆ 126.8 ಕೋಟಿ ಲೀಟರ್‌ ಕೊಳಚೆಯನ್ನು ಮಾತ್ರ ಪ್ರತಿದಿನ ಸಂಸ್ಕರಿಸಲಾಗುತ್ತಿದೆ. ಸಂಸ್ಕರಣೆ ಆಗದ ಮತ್ತು ಸಂಸ್ಕರಣೆ ಮಾಡಲಾಗುತ್ತಿರುವ ಕೊಳಚೆ ಪ್ರಮಾಣದ ಅಂತರ ಪ್ರತಿದಿನ 149.0 ಕೋಟಿ ಲೀಟರ್‌ ಎಂದು ಎನ್‌ಜಿಟಿ ಹೇಳಿದೆ.

ಆರೋಗ್ಯ ಸಮಸ್ಯೆಗಳು ತಲೆದೋರುವುದನ್ನು ಹೆಚ್ಚಿನ ಸಮಯಕ್ಕೆ ಮುಂದೂಡಲು ಸಾಧ್ಯವಿಲ್ಲ. ಮಾಲಿನ್ಯರಹಿತ ಪರಿಸರವನ್ನು ಒದಗಿಸುವುದು ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳ ಸಾಂವಿಧಾನಿಕ ಕರ್ತವ್ಯವಾಗಿದೆ. ಅಲ್ಲದೇ ಇದು ಜೀವಿಸುವ ಹಕ್ಕಿನ ಭಾಗವಾಗದ್ದು, ಜನರ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದೆ. ಹಾಗಾಗಿ, ಸ್ವಚ್ಛ ಪರಿಸರ ಒದಗಿಸುವುದು ಸರ್ಕಾರದ ಹೊಣೆಗಾರಿಕೆ. ಹಣಕಾಸಿನ ಕೊರತೆಯ ನೆಪವನ್ನು ಈ ವಿಚಾರದಲ್ಲಿ ನೀಡಲಾಗುವುದಿಲ್ಲ ಎಂದು ಎನ್‌ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಎ.ಕೆ. ಗೋಯಲ್‌ ಅವರಿದ್ದ ಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT