<p><strong>ನವದೆಹಲಿ:</strong>ಉತ್ತರ ಪ್ರದೇಶ ಹಾಗೂ ಬಿಹಾರದಲ್ಲಿ ಗಂಗಾ ನದಿಯಲ್ಲಿ ಹೆಣಗಳು ತೇಲಿ ಬಂದ ವಿದ್ಯಮಾನಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ನಾಲ್ಕು ವಾರದೊಳಗೆ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್ಆರ್ಆರ್ಸಿ) ಕೇಂದ್ರ ಹಾಗೂ ಉಭಯ ರಾಜ್ಯ ಸರ್ಕಾರಗಳಿಗೆ ಗುರುವಾರ ಸೂಚಿಸಿದೆ.</p>.<p>ಈ ಸಂಬಂಧ ಸಲ್ಲಿಕೆಯಾದ ದೂರಿನ ಆಧಾರದ ಮೇಲೆ ಆಯೋಗವು ಎರಡೂ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ, ಕೇಂದ್ರದ ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.</p>.<p>ನದಿಯಲ್ಲಿ ತೇಲಿಬಂದ ಹೆಣಗಳು ಕೋವಿಡ್–19 ನಿಂದ ಮೃತಪಟ್ಟವರಿರಬಹುದು ಎಂಬ ಸಂಶಯವಿದೆ.</p>.<p>‘ಅರ್ಧ ಸುಟ್ಟ ಹಾಗೂ ಸುಡದೇ ಇರುವಂಥ ಮೃತದೇಹಗಳನ್ನು ಗಂಗಾ ನದಿಯಲ್ಲಿ ತೇಲಿ ಬಿಡಬಾರದು ಎಂಬ ಬಗ್ಗೆ ಜನರಲ್ಲಿ ಅರಿವು ಮೂಡಿಸುವಲ್ಲಿ ಸಂಬಂಧಪಟ್ಟವರು ವಿಫಲರಾಗಿದ್ದಾರೆ’ ಎಂದು ಆಯೋಗ ಅಭಿಪ್ರಾಯಪಟ್ಟಿದೆ.</p>.<p>ಗಂಗೆ ನದಿಯಲ್ಲಿ ಮೃತದೇಹಗಳನ್ನು ಎಸೆಯುವುದು ‘ರಾಷ್ಟ್ರೀಯ ಗಂಗಾ ನದಿ ಸ್ವಚ್ಛತಾ ಮಿಷನ್’ ಯೋಜನೆಯ ಉಲ್ಲಂಘನೆಯೂ ಆಗುವುದು ಎಂದೂ ಆಯೋಗ ಹೇಳಿದೆ.</p>.<p>‘ಈ ಮೃತದೇಹಗಳು ಕೋವಿಡ್–19ನಿಂದ ಸಾವನ್ನಪ್ಪಿದವರದಾಗಿರದಿದ್ದರೂ, ಈ ರೀತಿ ಹೆಣಗಳನ್ನು ನದಿಗೆ ಎಸೆಯುವುದು ಸಮಾಜವೇ ತಲೆ ತಗ್ಗಿಸುವಂಥ ವಿಚಾರ. ಇದು ಮೃತ ವ್ಯಕ್ತಿಗಳಿಗೂ ಅಗೌರವ ತೋರಿದಂತೆ’ ಎಂದಿದೆ.</p>.<p>‘ಸಾವಿರಾರು ಜನರು ತಮ್ಮ ದೈನಂದಿನ ಚಟುವಟಿಕೆಗಳಿಗೆ ಗಂಗಾ ನದಿಯನ್ನೇ ಅವಲಂಬಿಸಿದ್ದಾರೆ. ಈ ರೀತಿ ಹೆಣಗಳನ್ನು ಎಸೆಯುವುದು, ನದಿಯನ್ನು ಅವಲಂಬಿಸಿದವರ ಮೇಲೆ ದುಷ್ಪರಿಣಮ ಬೀರುತ್ತದೆ. ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುಬೇಕು’ ಎಂದು ದೂರುದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಉತ್ತರ ಪ್ರದೇಶ ಹಾಗೂ ಬಿಹಾರದಲ್ಲಿ ಗಂಗಾ ನದಿಯಲ್ಲಿ ಹೆಣಗಳು ತೇಲಿ ಬಂದ ವಿದ್ಯಮಾನಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ನಾಲ್ಕು ವಾರದೊಳಗೆ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್ಆರ್ಆರ್ಸಿ) ಕೇಂದ್ರ ಹಾಗೂ ಉಭಯ ರಾಜ್ಯ ಸರ್ಕಾರಗಳಿಗೆ ಗುರುವಾರ ಸೂಚಿಸಿದೆ.</p>.<p>ಈ ಸಂಬಂಧ ಸಲ್ಲಿಕೆಯಾದ ದೂರಿನ ಆಧಾರದ ಮೇಲೆ ಆಯೋಗವು ಎರಡೂ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ, ಕೇಂದ್ರದ ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.</p>.<p>ನದಿಯಲ್ಲಿ ತೇಲಿಬಂದ ಹೆಣಗಳು ಕೋವಿಡ್–19 ನಿಂದ ಮೃತಪಟ್ಟವರಿರಬಹುದು ಎಂಬ ಸಂಶಯವಿದೆ.</p>.<p>‘ಅರ್ಧ ಸುಟ್ಟ ಹಾಗೂ ಸುಡದೇ ಇರುವಂಥ ಮೃತದೇಹಗಳನ್ನು ಗಂಗಾ ನದಿಯಲ್ಲಿ ತೇಲಿ ಬಿಡಬಾರದು ಎಂಬ ಬಗ್ಗೆ ಜನರಲ್ಲಿ ಅರಿವು ಮೂಡಿಸುವಲ್ಲಿ ಸಂಬಂಧಪಟ್ಟವರು ವಿಫಲರಾಗಿದ್ದಾರೆ’ ಎಂದು ಆಯೋಗ ಅಭಿಪ್ರಾಯಪಟ್ಟಿದೆ.</p>.<p>ಗಂಗೆ ನದಿಯಲ್ಲಿ ಮೃತದೇಹಗಳನ್ನು ಎಸೆಯುವುದು ‘ರಾಷ್ಟ್ರೀಯ ಗಂಗಾ ನದಿ ಸ್ವಚ್ಛತಾ ಮಿಷನ್’ ಯೋಜನೆಯ ಉಲ್ಲಂಘನೆಯೂ ಆಗುವುದು ಎಂದೂ ಆಯೋಗ ಹೇಳಿದೆ.</p>.<p>‘ಈ ಮೃತದೇಹಗಳು ಕೋವಿಡ್–19ನಿಂದ ಸಾವನ್ನಪ್ಪಿದವರದಾಗಿರದಿದ್ದರೂ, ಈ ರೀತಿ ಹೆಣಗಳನ್ನು ನದಿಗೆ ಎಸೆಯುವುದು ಸಮಾಜವೇ ತಲೆ ತಗ್ಗಿಸುವಂಥ ವಿಚಾರ. ಇದು ಮೃತ ವ್ಯಕ್ತಿಗಳಿಗೂ ಅಗೌರವ ತೋರಿದಂತೆ’ ಎಂದಿದೆ.</p>.<p>‘ಸಾವಿರಾರು ಜನರು ತಮ್ಮ ದೈನಂದಿನ ಚಟುವಟಿಕೆಗಳಿಗೆ ಗಂಗಾ ನದಿಯನ್ನೇ ಅವಲಂಬಿಸಿದ್ದಾರೆ. ಈ ರೀತಿ ಹೆಣಗಳನ್ನು ಎಸೆಯುವುದು, ನದಿಯನ್ನು ಅವಲಂಬಿಸಿದವರ ಮೇಲೆ ದುಷ್ಪರಿಣಮ ಬೀರುತ್ತದೆ. ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುಬೇಕು’ ಎಂದು ದೂರುದಾರರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>