ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗೆಯಲ್ಲಿ ತೇಲಿಬಂದ ಹೆಣಗಳು: ವರದಿಗೆ ಎನ್‌ಎಚ್‌ಆರ್‌ಸಿ ಸೂಚನೆ

ಉತ್ತರ ಪ್ರದೇಶ, ಬಿಹಾರ ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್‌
Last Updated 13 ಮೇ 2021, 14:25 IST
ಅಕ್ಷರ ಗಾತ್ರ

ನವದೆಹಲಿ:ಉತ್ತರ ಪ್ರದೇಶ ಹಾಗೂ ಬಿಹಾರದಲ್ಲಿ ಗಂಗಾ ನದಿಯಲ್ಲಿ ಹೆಣಗಳು ತೇಲಿ ಬಂದ ವಿದ್ಯಮಾನಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ನಾಲ್ಕು ವಾರದೊಳಗೆ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಆರ್‌ಆರ್‌ಸಿ) ಕೇಂದ್ರ ಹಾಗೂ ಉಭಯ ರಾಜ್ಯ ಸರ್ಕಾರಗಳಿಗೆ ಗುರುವಾರ ಸೂಚಿಸಿದೆ.

ಈ ಸಂಬಂಧ ಸಲ್ಲಿಕೆಯಾದ ದೂರಿನ ಆಧಾರದ ಮೇಲೆ ಆಯೋಗವು ಎರಡೂ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ, ಕೇಂದ್ರದ ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿಗೆ ನೋಟಿಸ್‌ ಜಾರಿ ಮಾಡಿದೆ.

ನದಿಯಲ್ಲಿ ತೇಲಿಬಂದ ಹೆಣಗಳು ಕೋವಿಡ್‌–19 ನಿಂದ ಮೃತಪಟ್ಟವರಿರಬಹುದು ಎಂಬ ಸಂಶಯವಿದೆ.

‘ಅರ್ಧ ಸುಟ್ಟ ಹಾಗೂ ಸುಡದೇ ಇರುವಂಥ ಮೃತದೇಹಗಳನ್ನು ಗಂಗಾ ನದಿಯಲ್ಲಿ ತೇಲಿ ಬಿಡಬಾರದು ಎಂಬ ಬಗ್ಗೆ ಜನರಲ್ಲಿ ಅರಿವು ಮೂಡಿಸುವಲ್ಲಿ ಸಂಬಂಧಪಟ್ಟವರು ವಿಫಲರಾಗಿದ್ದಾರೆ’ ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ಗಂಗೆ ನದಿಯಲ್ಲಿ ಮೃತದೇಹಗಳನ್ನು ಎಸೆಯುವುದು ‘ರಾಷ್ಟ್ರೀಯ ಗಂಗಾ ನದಿ ಸ್ವಚ್ಛತಾ ಮಿಷನ್‌’ ಯೋಜನೆಯ ಉಲ್ಲಂಘನೆಯೂ ಆಗುವುದು ಎಂದೂ ಆಯೋಗ ಹೇಳಿದೆ.

‘ಈ ಮೃತದೇಹಗಳು ಕೋವಿಡ್‌–19ನಿಂದ ಸಾವನ್ನಪ್ಪಿದವರದಾಗಿರದಿದ್ದರೂ, ಈ ರೀತಿ ಹೆಣಗಳನ್ನು ನದಿಗೆ ಎಸೆಯುವುದು ಸಮಾಜವೇ ತಲೆ ತಗ್ಗಿಸುವಂಥ ವಿಚಾರ. ಇದು ಮೃತ ವ್ಯಕ್ತಿಗಳಿಗೂ ಅಗೌರವ ತೋರಿದಂತೆ’ ಎಂದಿದೆ.

‘ಸಾವಿರಾರು ಜನರು ತಮ್ಮ ದೈನಂದಿನ ಚಟುವಟಿಕೆಗಳಿಗೆ ಗಂಗಾ ನದಿಯನ್ನೇ ಅವಲಂಬಿಸಿದ್ದಾರೆ. ಈ ರೀತಿ ಹೆಣಗಳನ್ನು ಎಸೆಯುವುದು, ನದಿಯನ್ನು ಅವಲಂಬಿಸಿದವರ ಮೇಲೆ ದುಷ್ಪರಿಣಮ ಬೀರುತ್ತದೆ. ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುಬೇಕು’ ಎಂದು ದೂರುದಾರರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT