ಗುವಾಹಟಿ: ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಮಾನವ ಕಳ್ಳಸಾಗಣೆ ದಂಧೆ ನಿರ್ವಹಣೆ ಹಾಗೂ ರೊಹಿಂಗ್ಯಾ ನಿರಾಶ್ರಿತರಿಗೆ ನಕಲಿ ದಾಖಲೆಗಳನ್ನು ನೀಡಿ ಭಾರತದಲ್ಲಿ ನೆಲೆಸಲು ನೆರವು ನೀಡುತ್ತಿದ್ದ ಅಸ್ಸಾಂ ಮೂಲದ ಪ್ರಮುಖ ಆರೋಪಿ ಸೇರಿದಂತೆ ಒಟ್ಟು ಆರು ಮಂದಿಯನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ) ಬಂಧಿಸಿದೆ.
ಅಸ್ಸಾಂ ಮೂಲದ ಕುಮ್ಕುಮ್ ಅಹ್ಮದ್ ಚೌಧರಿ ಅಲಿಯಾಸ್ ಅಸಿಕ್ವಿಲ್ ಅಹ್ಮದ್ ಈ ದಂಧೆಯ ಪ್ರಮುಖ ರೂವಾರಿಯಾಗಿದ್ದು, ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.