ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಾರಾಣಸಿ ಮತ್ತು ದೆಹಲಿಯ ಹಲವೆಡೆ ಬುಧವಾರ ದಾಳಿ ನಡೆಸಿದ್ದು, ಐಸಿಸ್ ಬೆಂಬಲಿತ ವ್ಯಕ್ತಿಯೊಬ್ಬನನ್ನು ಬಂಧಿಸಿದೆ.
ಬಸಿತ್ ಕಲಾಂ ಸಿದ್ದಿಕಿ ಬಂಧಿತ ಆರೋಪಿ. ಈತ ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ಸೇರಿ (ಐಸಿಸ್) ಯುವಕರನ್ನು ಬಳಸಿಕೊಂಡು ದೇಶದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸುತ್ತಿದ್ದ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
The case relates to the conspiracy by ISIS, a proscribed terrorist organization, to radicalize and recruit impressionable youth in India to wage violent jihad against India by carrying out acts of terrorist violence: National Investigation Agency (NIA)