<p class="title">ಚೆನ್ನೈ(ಪಿಟಿಐ) ಇರಾನ್ ಮತ್ತು ಪಾಕಿಸ್ತಾನದಿಂದ ಶ್ರೀಲಂಕಾಕ್ಕೆ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಮಾದಕ ವಸ್ತುಗಳ ಕಳ್ಳ ಸಾಗಾಣಿಕೆಯಲ್ಲಿ ತೊಡಗಿರುವವರ ನಿವಾಸಗಳನ್ನು ಗುರಿಯಾಗಿಸಿಕೊಂಡು ತಮಿಳುನಾಡು ಮತ್ತು ಕೇರಳದ ಏಳು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಶೋಧ ನಡೆಸಿದೆ.</p>.<p class="title">ತಮಿಳುನಾಡಿನ ಚೆನ್ನೈ ಮತ್ತು ತಿರುವಳ್ಳೂರು ಜಿಲ್ಲೆಗಳು ಮತ್ತು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಶೋಧ ನಡೆಸಲಾಗಿದೆ ಎಂದು ತನಿಖಾ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p class="title">ಶೋಧದ ವೇಳೆ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಟಿಟಿಇ(ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಲಮ್) ಗೆ ಸಂಬಂಧಿಸಿದ ಪುಸ್ತಕಗಳು, ಮೊಬೈಲ್ ಫೋನ್ಗಳು, ಸಿಮ್ ಕಾರ್ಡ್ಗಳು ಮತ್ತು ಟ್ಯಾಬ್ಲೆಟ್ಗಳು ಸೇರಿ ಏಳು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್ಐಎ ಅಧಿಕಾರಿ ಹೇಳಿದರು.</p>.<p>ಇದೇ ವರ್ಷದ ಮಾರ್ಚ್ 18ರಂದು ಅರಬ್ಬಿ ಸಮುದ್ರದಲ್ಲಿ ವಿಜಿಂಜಮ್ ಬಳಿ ಕರಾವಳಿ ರಕ್ಷಣಾ ಪಡೆ ಗಸ್ತು ತಿರುಗುತ್ತಿದ್ದಾಗ, ಶ್ರೀಲಂಕಾಕ್ಕೆ ಸೇರಿದ ದೋಣಿಯಲ್ಲಿ ಸಾಗಿಸುತ್ತಿದ್ದ 300 ಕೆ.ಜಿ ಹೆರಾಯಿನ್, 5 ಎಕೆ -47 ರೈಫಲ್ಗಳು ಮತ್ತು 1 ಸಾವಿರ ಜೀವಂತ ಗುಂಡುಗಳನ್ನು ವಶಪಡಿಸಿಕೊಂಡು, ಆರು ಮಂದಿ ಶ್ರೀಲಂಕಾ ಪ್ರಜೆಗಳನ್ನು ಬಂಧಿಸಿತ್ತು. ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಏಪ್ರಿಲ್ನಲ್ಲಿ ಪ್ರಕರಣ ದಾಖಲಿಸಲಾಗಿತ್ತು.</p>.<p>ಮೇನಲ್ಲಿ ಪ್ರಕರಣವನ್ನು ಮರು ದಾಖಲಿಸಿಕೊಂಡು ತನಿಖೆ ಆರಂಭಿಸಿದಎನ್ಐಎ, ಸುರೇಶ್ ಮತ್ತು ಸೌಂದರ್ಯರಾಜನ್ ಎಂಬ ಇಬ್ಬರು ಆರೋಪಿಗಳನ್ನು ಆಗಸ್ಟ್ 2ರಂದು ಬಂಧಿಸಿತ್ತು.</p>.<p>ಶಂಕಿತ ಆರೋಪಿಗಳು ಇರಾನ್ ಮತ್ತು ಪಾಕಿಸ್ತಾನದಿಂದ ಶ್ರೀಲಂಕಾಗೆ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಮಾದಕ ವಸ್ತುಗಳ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದರು ಎಂದು ಎನ್ಐಎ ಅಧಿಕಾರಿ ತಿಳಿಸಿದ್ದಾರೆ.</p>.<p>ಕಳೆದ ಒಂದು ವರ್ಷದಲ್ಲಿ, ಕರಾವಳಿ ಗಸ್ತು ಪಡೆ ಅಂದಾಜು ₹4,900 ಕೋಟಿ ಮೌಲ್ಯದ ಸುಮಾರು 1.6 ಟನ್ ಮಾದಕ ದ್ರವ್ಯ ವಶಪಡಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ಚೆನ್ನೈ(ಪಿಟಿಐ) ಇರಾನ್ ಮತ್ತು ಪಾಕಿಸ್ತಾನದಿಂದ ಶ್ರೀಲಂಕಾಕ್ಕೆ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಮಾದಕ ವಸ್ತುಗಳ ಕಳ್ಳ ಸಾಗಾಣಿಕೆಯಲ್ಲಿ ತೊಡಗಿರುವವರ ನಿವಾಸಗಳನ್ನು ಗುರಿಯಾಗಿಸಿಕೊಂಡು ತಮಿಳುನಾಡು ಮತ್ತು ಕೇರಳದ ಏಳು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಶೋಧ ನಡೆಸಿದೆ.</p>.<p class="title">ತಮಿಳುನಾಡಿನ ಚೆನ್ನೈ ಮತ್ತು ತಿರುವಳ್ಳೂರು ಜಿಲ್ಲೆಗಳು ಮತ್ತು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಶೋಧ ನಡೆಸಲಾಗಿದೆ ಎಂದು ತನಿಖಾ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದರು.</p>.<p class="title">ಶೋಧದ ವೇಳೆ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಟಿಟಿಇ(ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಲಮ್) ಗೆ ಸಂಬಂಧಿಸಿದ ಪುಸ್ತಕಗಳು, ಮೊಬೈಲ್ ಫೋನ್ಗಳು, ಸಿಮ್ ಕಾರ್ಡ್ಗಳು ಮತ್ತು ಟ್ಯಾಬ್ಲೆಟ್ಗಳು ಸೇರಿ ಏಳು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್ಐಎ ಅಧಿಕಾರಿ ಹೇಳಿದರು.</p>.<p>ಇದೇ ವರ್ಷದ ಮಾರ್ಚ್ 18ರಂದು ಅರಬ್ಬಿ ಸಮುದ್ರದಲ್ಲಿ ವಿಜಿಂಜಮ್ ಬಳಿ ಕರಾವಳಿ ರಕ್ಷಣಾ ಪಡೆ ಗಸ್ತು ತಿರುಗುತ್ತಿದ್ದಾಗ, ಶ್ರೀಲಂಕಾಕ್ಕೆ ಸೇರಿದ ದೋಣಿಯಲ್ಲಿ ಸಾಗಿಸುತ್ತಿದ್ದ 300 ಕೆ.ಜಿ ಹೆರಾಯಿನ್, 5 ಎಕೆ -47 ರೈಫಲ್ಗಳು ಮತ್ತು 1 ಸಾವಿರ ಜೀವಂತ ಗುಂಡುಗಳನ್ನು ವಶಪಡಿಸಿಕೊಂಡು, ಆರು ಮಂದಿ ಶ್ರೀಲಂಕಾ ಪ್ರಜೆಗಳನ್ನು ಬಂಧಿಸಿತ್ತು. ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಏಪ್ರಿಲ್ನಲ್ಲಿ ಪ್ರಕರಣ ದಾಖಲಿಸಲಾಗಿತ್ತು.</p>.<p>ಮೇನಲ್ಲಿ ಪ್ರಕರಣವನ್ನು ಮರು ದಾಖಲಿಸಿಕೊಂಡು ತನಿಖೆ ಆರಂಭಿಸಿದಎನ್ಐಎ, ಸುರೇಶ್ ಮತ್ತು ಸೌಂದರ್ಯರಾಜನ್ ಎಂಬ ಇಬ್ಬರು ಆರೋಪಿಗಳನ್ನು ಆಗಸ್ಟ್ 2ರಂದು ಬಂಧಿಸಿತ್ತು.</p>.<p>ಶಂಕಿತ ಆರೋಪಿಗಳು ಇರಾನ್ ಮತ್ತು ಪಾಕಿಸ್ತಾನದಿಂದ ಶ್ರೀಲಂಕಾಗೆ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಮಾದಕ ವಸ್ತುಗಳ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದರು ಎಂದು ಎನ್ಐಎ ಅಧಿಕಾರಿ ತಿಳಿಸಿದ್ದಾರೆ.</p>.<p>ಕಳೆದ ಒಂದು ವರ್ಷದಲ್ಲಿ, ಕರಾವಳಿ ಗಸ್ತು ಪಡೆ ಅಂದಾಜು ₹4,900 ಕೋಟಿ ಮೌಲ್ಯದ ಸುಮಾರು 1.6 ಟನ್ ಮಾದಕ ದ್ರವ್ಯ ವಶಪಡಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>