<p><strong>ನವದೆಹಲಿ: </strong>ಪಾಕಿಸ್ತಾನದಿಂದ ಭಾರತದೊಳಕ್ಕೆ ನುಸುಳಿ ಬಂದು ದೆಹಲಿ ಸೇರಿದಂತೆ ಭಾರತದ ಹಲವೆಡೆ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಪ್ರಕರಣದಡಿಎನ್ಐಎ ವಿಶೇಷ ನ್ಯಾಯಾಲಯವು ಎಲ್ಇಟಿ ಉಗ್ರನೊಬ್ಬನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.</p>.<p>ಪಾಕಿಸ್ತಾನದ ಲಷ್ಕರ್ ಎ ತಯಬಾ ಸಂಘಟನೆಯ (ಎಲ್ಇಟಿ) ಉಗ್ರ ಬಹದ್ದೂರ್ ಆಲಿ ವಿರುದ್ಧದ ಆರೋಪ ಸಾಬೀತಾಗಿದೆ. ಪಟಿಯಾಲ ಹೌಸ್ ಕೋರ್ಟ್ನ ವಿಶೇಷ ನ್ಯಾಯಾಧೀಶರು ಆತನಿಗೆ 10 ವರ್ಷದ ಜೈಲು ಶಿಕ್ಷೆ ವಿಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p><strong>ಓದಿ:</strong><a href="https://www.prajavani.net/india-news/gujrat-cbi-court-discharges-3-cops-in-ishrat-jahan-encounter-case-818085.html" itemprop="url">ಇಶ್ರತ್ ಜಹಾನ್ ಎನ್ಕೌಂಟರ್: ಮೂವರು ಪೊಲೀಸ್ ಅಧಿಕಾರಿಗಳು ನಿರಾಳ</a></p>.<p>‘2016ರಲ್ಲಿ ದೆಹಲಿ ಮತ್ತು ಭಾರತದ ಹಲವೆಡೆ ದಾಳಿ ನಡೆಸಲು ಬಹದ್ದೂರ್ ಆಲಿ ತನ್ನ ಸಹಚರರಾದ ಅಬು ಸಾದ್ ಮತ್ತು ಅಬು ದಾರ್ದಾ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ಗಡಿಯನ್ನು ದಾಟಿ ಬಂದಿದ್ದರು. ಬಹದ್ದೂರ್ ಅಲಿಯನ್ನು ಕುಪ್ವಾರಾದಲ್ಲಿ ಬಂಧಿಸಲಾಗಿತ್ತು.2017ರ ಜನವರಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿತ್ತು’ ಎಂದು ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪಾಕಿಸ್ತಾನದಿಂದ ಭಾರತದೊಳಕ್ಕೆ ನುಸುಳಿ ಬಂದು ದೆಹಲಿ ಸೇರಿದಂತೆ ಭಾರತದ ಹಲವೆಡೆ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಪ್ರಕರಣದಡಿಎನ್ಐಎ ವಿಶೇಷ ನ್ಯಾಯಾಲಯವು ಎಲ್ಇಟಿ ಉಗ್ರನೊಬ್ಬನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.</p>.<p>ಪಾಕಿಸ್ತಾನದ ಲಷ್ಕರ್ ಎ ತಯಬಾ ಸಂಘಟನೆಯ (ಎಲ್ಇಟಿ) ಉಗ್ರ ಬಹದ್ದೂರ್ ಆಲಿ ವಿರುದ್ಧದ ಆರೋಪ ಸಾಬೀತಾಗಿದೆ. ಪಟಿಯಾಲ ಹೌಸ್ ಕೋರ್ಟ್ನ ವಿಶೇಷ ನ್ಯಾಯಾಧೀಶರು ಆತನಿಗೆ 10 ವರ್ಷದ ಜೈಲು ಶಿಕ್ಷೆ ವಿಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p><strong>ಓದಿ:</strong><a href="https://www.prajavani.net/india-news/gujrat-cbi-court-discharges-3-cops-in-ishrat-jahan-encounter-case-818085.html" itemprop="url">ಇಶ್ರತ್ ಜಹಾನ್ ಎನ್ಕೌಂಟರ್: ಮೂವರು ಪೊಲೀಸ್ ಅಧಿಕಾರಿಗಳು ನಿರಾಳ</a></p>.<p>‘2016ರಲ್ಲಿ ದೆಹಲಿ ಮತ್ತು ಭಾರತದ ಹಲವೆಡೆ ದಾಳಿ ನಡೆಸಲು ಬಹದ್ದೂರ್ ಆಲಿ ತನ್ನ ಸಹಚರರಾದ ಅಬು ಸಾದ್ ಮತ್ತು ಅಬು ದಾರ್ದಾ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರದ ಗಡಿಯನ್ನು ದಾಟಿ ಬಂದಿದ್ದರು. ಬಹದ್ದೂರ್ ಅಲಿಯನ್ನು ಕುಪ್ವಾರಾದಲ್ಲಿ ಬಂಧಿಸಲಾಗಿತ್ತು.2017ರ ಜನವರಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿತ್ತು’ ಎಂದು ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>