ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರ ಹರ್‌ಪ್ರೀತ್ ಸಿಂಗ್ ಮಾಹಿತಿ ನೀಡಿದವರಿಗೆ ₹10 ಲಕ್ಷ: ಎನ್‌ಐಎ ಘೋಷಣೆ

Last Updated 7 ಸೆಪ್ಟೆಂಬರ್ 2022, 16:08 IST
ಅಕ್ಷರ ಗಾತ್ರ

ನವದೆಹಲಿ: ತಲೆಮರೆಸಿಕೊಂಡಿರುವ ಉಗ್ರ ಹರ್‌ಪ್ರೀತ್ ಸಿಂಗ್ ಬಂಧನಕ್ಕೆ ನೆರವಾಗುವ ಮಾಹಿತಿ ಕೊಟ್ಟವರಿಗೆ ₹10 ಲಕ್ಷ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಘೋಷಿಸಿದೆ.

2021ರ ಡಿಸೆಂಬರ್‌ನಲ್ಲಿ ಪಂಜಾಬ್‌ನ ಲುಧಿಯಾನ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಹರ್‌ಪ್ರೀತ್ ಸಿಂಗ್ ಪ್ರಮುಖ ಆರೋಪಿಯಾಗಿದ್ದಾನೆ.

ಇಂಟರ್‌ ನ್ಯಾಷನಲ್ ಸಿಖ್ ಯೂತ್ ಫೆಡರೇಶನ್ ಸಂಘಟನೆಗೆ ಸೇರಿರುವ ಹರ್‌ಪ್ರೀತ್ ಸಿಂಗ್ ಪ್ರಸ್ತುತ ಮಲೇಷ್ಯಾದಲ್ಲಿರುವುದಾಗಿ ಎನ್‌ಐಎ ಮಾಹಿತಿ ನೀಡಿದೆ.

ಇವನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT