<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರ ಹಾಗೂ ದೇಶದ ಇತರ ಭಾಗಗಳಲ್ಲಿ ಭೌತಿಕ ಹಾಗೂ ಸೈಬರ್ ಚಟುವಟಿಕೆ ಮೂಲಕ ಭಯೋತ್ಪಾದನಾ ಕೃತ್ಯ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಮಹಿಳೆಯೊಬ್ಬರು ಸೇರಿ 25 ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಶುಕ್ರವಾರ ಆರೋಪಪಟ್ಟಿ ಸಲ್ಲಿಸಿದೆ.</p>.<p>‘ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತಯಬಾ(ಎಲ್ಇಟಿ), ಜೈಶೆ ಮೊಹಮ್ಮದ್ (ಜೆಎಂ), ಹಿಜ್ಬುಲ್–ಮುಜಾಹಿದೀನ್ (ಎಚ್ಎಂ), ಅಲ್-ಬದ್ರ್ ಹಾಗೂ ಇತರೆ ಸಂಯೋಜಿತ ಸಂಘಟನೆಗಳಾದ ಟಿಆರ್ಎಫ್ ಹಾಗೂ ಪಿಎಎಫ್ಎಫ್ನ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಎನ್ಐಎ ವಕ್ತಾರರು ತಿಳಿಸಿದರು.</p>.<p>’ಇಲ್ಲಿನ ಮೂಲನಿವಾಸಿಗಳ ಪ್ರತಿರೋಧ ಗುಂಪುಗಳ ಹೆಸರಿನಲ್ಲಿ ಪಾಕಿಸ್ತಾನ ಮೂಲದ ನಿಷೇಧಿತ ಉಗ್ರ ಸಂಘಟನೆಗಳು ಒಟ್ಟಾಗಿ ಸೇರಿ ಕಾರ್ಯಾಚರಣೆ ವಿಧಾನದಲ್ಲಿ ಬದಲಾವಣೆ ಮಾಡಿಕೊಂಡು ಭಯೋತ್ಪಾದನಾ ಕೃತ್ಯಗಳನ್ನು ನಡೆಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪಾತ್ರವನ್ನು ಅಲ್ಲಗಳೆಯುವ ಪಿತೂರಿ ನಡೆಸಿದ್ದರು ಎಂಬುದು ತನಿಖೆ ವೇಳೆ ಕಂಡು ಬಂದಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರ ಹಾಗೂ ದೇಶದ ಇತರ ಭಾಗಗಳಲ್ಲಿ ಭೌತಿಕ ಹಾಗೂ ಸೈಬರ್ ಚಟುವಟಿಕೆ ಮೂಲಕ ಭಯೋತ್ಪಾದನಾ ಕೃತ್ಯ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಮಹಿಳೆಯೊಬ್ಬರು ಸೇರಿ 25 ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಶುಕ್ರವಾರ ಆರೋಪಪಟ್ಟಿ ಸಲ್ಲಿಸಿದೆ.</p>.<p>‘ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತಯಬಾ(ಎಲ್ಇಟಿ), ಜೈಶೆ ಮೊಹಮ್ಮದ್ (ಜೆಎಂ), ಹಿಜ್ಬುಲ್–ಮುಜಾಹಿದೀನ್ (ಎಚ್ಎಂ), ಅಲ್-ಬದ್ರ್ ಹಾಗೂ ಇತರೆ ಸಂಯೋಜಿತ ಸಂಘಟನೆಗಳಾದ ಟಿಆರ್ಎಫ್ ಹಾಗೂ ಪಿಎಎಫ್ಎಫ್ನ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಎನ್ಐಎ ವಕ್ತಾರರು ತಿಳಿಸಿದರು.</p>.<p>’ಇಲ್ಲಿನ ಮೂಲನಿವಾಸಿಗಳ ಪ್ರತಿರೋಧ ಗುಂಪುಗಳ ಹೆಸರಿನಲ್ಲಿ ಪಾಕಿಸ್ತಾನ ಮೂಲದ ನಿಷೇಧಿತ ಉಗ್ರ ಸಂಘಟನೆಗಳು ಒಟ್ಟಾಗಿ ಸೇರಿ ಕಾರ್ಯಾಚರಣೆ ವಿಧಾನದಲ್ಲಿ ಬದಲಾವಣೆ ಮಾಡಿಕೊಂಡು ಭಯೋತ್ಪಾದನಾ ಕೃತ್ಯಗಳನ್ನು ನಡೆಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪಾತ್ರವನ್ನು ಅಲ್ಲಗಳೆಯುವ ಪಿತೂರಿ ನಡೆಸಿದ್ದರು ಎಂಬುದು ತನಿಖೆ ವೇಳೆ ಕಂಡು ಬಂದಿದೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>