<p class="bodytext"><strong>ವಿಜಯವಾಡ: </strong>ದೇಶದಲ್ಲಿ ಗೂಢಚರ್ಯೆ ಚಟುವಟಿಕೆ ನಡೆಸಲು ಪಾಕಿಸ್ತಾನದ ಗೂಢಚರ್ಯೆ ಸಂಸ್ಥೆ ಐಎಸ್ಐ ಪರ ಹಣ ಸಂಗ್ರಹಿಸಿರುವ ಆರೋಪ ಪ್ರಕರಣದ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಶುಕ್ರವಾರ ಪೂರಕ ಚಾರ್ಜ್ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="bodytext">ಗುಜರಾತ್ನ ಗೋಧ್ರಾ ನಿವಾಸಿ ಇಮ್ರಾನ್ ಯಾಕೂಬ್ ಗೀತೇಲಿ ವಿರುದ್ಧ ಮೊದಲ ಪೂರಕ ಚಾರ್ಜ್ಶೀಟ್ ಅನ್ನು ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆಂಧ್ರಪ್ರದೇಶದ ವಿಜಯವಾಡದ ವಿಶೇಷ ಎನ್ಐಎ ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p class="bodytext">ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಐಎಸ್ಐ ಏಜೆಂಟ್ ಆಗಿ ಪಿತೂರಿ ನಡೆಸಿದ ಸಂಬಂಧ 2019ರ ನವೆಂಬರ್ನಲ್ಲಿ ವಿಜಯವಾಡದಲ್ಲಿ ಐಪಿಸಿ, ಯುಎಪಿಎ ಮತ್ತು ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ರಾಷ್ಟ್ರೀಯ ತನಿಖಾ ಸಂಸ್ಥೆ ಈ ಪ್ರಕರಣವನ್ನು 2019ರ ಡಿಸೆಂಬರ್ನಲ್ಲಿ ಮರು ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p class="bodytext">ಗೀತೇಲಿ ಬಟ್ಟೆ ವ್ಯಾಪಾರದ ಸೋಗಿನಲ್ಲಿ, ಭಯೋತ್ಪಾದಕ ಚಟುವಟಿಕೆಗಳಿಗಾಗಿ ಹಣ ಸಂಗ್ರಹಿಸುತ್ತಿದ್ದ. ಪಾಕಿಸ್ತಾನಿ ಏಜೆಂಟರೊಂದಿಗೆ ಸಂಪರ್ಕದಲ್ಲಿದ್ದು, ಪಾಕಿಸ್ತಾನಕ್ಕೆ ಭೇಟಿ ನೀಡಿದಾಗ ಏಜೆಂಟರನ್ನು ಭೇಟಿಯಾಗುತ್ತಿದ್ದ ಎಂದು ಎನ್ಐಎ ಅಧಿಕಾರಿಗಳು ಹೇಳಿದ್ದಾರೆ.</p>.<p class="bodytext">ಪಾಕಿಸ್ತಾನದ ಐಎಸ್ಐ ಏಜೆಂಟರ ಸೂಚನೆಯ ಮೇರೆಗೆ ಗೀತೇಲಿ ಸೂಕ್ಷ್ಮ ಮತ್ತು ಕಾರ್ಯತಂತ್ರದ ಮಾಹಿತಿಗಳನ್ನು ನೌಕಾಪಡೆಯ ಸಿಬ್ಬಂದಿಯಿಂದ ಪಡೆದುಕೊಂಡು, ಅವರ ಖಾತೆಗಳಿಗೆ ಹಣವನ್ನು ವರ್ಗಾಯಿಸುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ವಿಜಯವಾಡ: </strong>ದೇಶದಲ್ಲಿ ಗೂಢಚರ್ಯೆ ಚಟುವಟಿಕೆ ನಡೆಸಲು ಪಾಕಿಸ್ತಾನದ ಗೂಢಚರ್ಯೆ ಸಂಸ್ಥೆ ಐಎಸ್ಐ ಪರ ಹಣ ಸಂಗ್ರಹಿಸಿರುವ ಆರೋಪ ಪ್ರಕರಣದ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಶುಕ್ರವಾರ ಪೂರಕ ಚಾರ್ಜ್ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="bodytext">ಗುಜರಾತ್ನ ಗೋಧ್ರಾ ನಿವಾಸಿ ಇಮ್ರಾನ್ ಯಾಕೂಬ್ ಗೀತೇಲಿ ವಿರುದ್ಧ ಮೊದಲ ಪೂರಕ ಚಾರ್ಜ್ಶೀಟ್ ಅನ್ನು ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆಂಧ್ರಪ್ರದೇಶದ ವಿಜಯವಾಡದ ವಿಶೇಷ ಎನ್ಐಎ ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p class="bodytext">ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಐಎಸ್ಐ ಏಜೆಂಟ್ ಆಗಿ ಪಿತೂರಿ ನಡೆಸಿದ ಸಂಬಂಧ 2019ರ ನವೆಂಬರ್ನಲ್ಲಿ ವಿಜಯವಾಡದಲ್ಲಿ ಐಪಿಸಿ, ಯುಎಪಿಎ ಮತ್ತು ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ರಾಷ್ಟ್ರೀಯ ತನಿಖಾ ಸಂಸ್ಥೆ ಈ ಪ್ರಕರಣವನ್ನು 2019ರ ಡಿಸೆಂಬರ್ನಲ್ಲಿ ಮರು ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p class="bodytext">ಗೀತೇಲಿ ಬಟ್ಟೆ ವ್ಯಾಪಾರದ ಸೋಗಿನಲ್ಲಿ, ಭಯೋತ್ಪಾದಕ ಚಟುವಟಿಕೆಗಳಿಗಾಗಿ ಹಣ ಸಂಗ್ರಹಿಸುತ್ತಿದ್ದ. ಪಾಕಿಸ್ತಾನಿ ಏಜೆಂಟರೊಂದಿಗೆ ಸಂಪರ್ಕದಲ್ಲಿದ್ದು, ಪಾಕಿಸ್ತಾನಕ್ಕೆ ಭೇಟಿ ನೀಡಿದಾಗ ಏಜೆಂಟರನ್ನು ಭೇಟಿಯಾಗುತ್ತಿದ್ದ ಎಂದು ಎನ್ಐಎ ಅಧಿಕಾರಿಗಳು ಹೇಳಿದ್ದಾರೆ.</p>.<p class="bodytext">ಪಾಕಿಸ್ತಾನದ ಐಎಸ್ಐ ಏಜೆಂಟರ ಸೂಚನೆಯ ಮೇರೆಗೆ ಗೀತೇಲಿ ಸೂಕ್ಷ್ಮ ಮತ್ತು ಕಾರ್ಯತಂತ್ರದ ಮಾಹಿತಿಗಳನ್ನು ನೌಕಾಪಡೆಯ ಸಿಬ್ಬಂದಿಯಿಂದ ಪಡೆದುಕೊಂಡು, ಅವರ ಖಾತೆಗಳಿಗೆ ಹಣವನ್ನು ವರ್ಗಾಯಿಸುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>